AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್​ನಲ್ಲಿ ಸೋಮವಾರ ಮಧ್ಯಾಹ್ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಶಾಖೆಯ ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ)ನ 36 ವರ್ಷದ ಮ್ಯಾನೇಜರ್ ಅನ್ನು ಸೆಕ್ಯುರಿಟಿ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊಲೆಯ ಆರೋಪಿ ಮತ್ತು ಅವರ ಸಹಚರ ಇಬ್ಬರನ್ನೂ ಬಂಧಿಸಲಾಗಿದೆ.ರಜೆ ಮತ್ತು ಸಂಬಳದ ವಿಷಯವಾಗಿ ಸೆಕ್ಯುರಿಟಿ ಗಾರ್ಡ್ ಕೋಪಗೊಂಡಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ
Shooting
ಸುಷ್ಮಾ ಚಕ್ರೆ
|

Updated on: Mar 18, 2026 | 9:04 PM

Share

ಗಾಜಿಯಾಬಾದ್, ಮಾರ್ಚ್ 18: ರಜೆ ನಿರಾಕರಿಸಿದ ಕಾರಣದಿಂದ ಮತ್ತು ಸಂಬಳವನ್ನು ಕಡಿತ ಮಾಡಿದ್ದರಿಂದ ಕೋಪಗೊಂಡ ಸೆಕ್ಯುರಿಟಿ ಗಾರ್ಡ್ ಬ್ಯಾಂಕ್ ಮ್ಯಾನೇಜರ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಗಾಜಿಯಾಬಾದ್‌ನ ಗಡಿಯ ಸಮೀಪವಿರುವ ಬಲರಾಮ್ ನಗರದಲ್ಲಿರುವ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ) ಶಾಖೆಯಲ್ಲಿ ಸೋಮವಾರ (ಮಾರ್ಚ್ 17) ಮಧ್ಯಾಹ್ನ ಈ ಘಟನೆ ನಡೆದಿದೆ.

ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ಬಿಹಾರದ ಪಾಟ್ನಾದ ಅಭಿಷೇಕ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸಾಹಿಬಾಬಾದ್ ಬಳಿಯ ಭೋಪ್ರಾದಲ್ಲಿ ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಶಂಕಿತ ಗಾರ್ಡ್ ಅನ್ನು ಹತ್ತಿರದ ಬಾಗ್‌ಪತ್ ಜಿಲ್ಲೆಯ ಮನ್ಸೂರ್‌ಪುರದ ನಿವಾಸಿ ರವೀಂದರ್ ಹೂಡಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸೋಮವಾರ ಮಧ್ಯಾಹ್ನ 1.15ರ ಸುಮಾರಿಗೆ ನಡೆದಿದೆ. ಈ ಘಟನೆಯ ನಂತರ ಸೆಕ್ಯುರಿಟಿ ಗಾರ್ಡ್ ಮತ್ತು ಅವರ ಸಹಚರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ಮಾಜಿ ಸೈನಿಕ ರವೀಂದ್ರ ಹೂಡಾ ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ, ಸೋಮವಾರ (ಮಾರ್ಚ್ 16) ಮಧ್ಯಾಹ್ನ 1.15ರ ಸುಮಾರಿಗೆ ಅವರು ಮ್ಯಾನೇಜರ್ ಅಭಿಷೇಕ್ ಕುಮಾರ್ ಅವರ ಕ್ಯಾಬಿನ್‌ಗೆ ನುಗ್ಗಿದರು. ಅವರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ವಲ್ಪ ಸಮಯದ ನಂತರ, ವ್ಯವಸ್ಥಾಪಕರ ಕೊಠಡಿಯಿಂದ ಗುಂಡೇಟಿನ ಶಬ್ದಗಳು ಕೇಳಿಬಂದವು. ಬ್ಯಾಂಕ್ ಸಿಬ್ಬಂದಿ ತಕ್ಷಣ ಪರಿಶೀಲಿಸಲು ಓಡಿಹೋದಾಗ ಮ್ಯಾನೇಜರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ