AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ
ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ
TV9 Web
| Edited By: |

Updated on: Sep 07, 2022 | 10:55 AM

Share

ಗಜಿಯಾಬಾದ್: ಹೌಸಿಂಗ್ ಸೊಸೈಟಿ ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ ಮಗುವಿಗೆ ನಾಯಿ (Pet Dog) ಕಚ್ಚಿದ ಹಿನ್ನೆಲೆಯಲ್ಲಿ ಆ ಸಾಕು ನಾಯಿಯ ಮಾಲೀಕರಾದ ಮಹಿಳೆಗೆ ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ 5,000 ರೂ. ದಂಡ ವಿಧಿಸಿದೆ. ಲಿಫ್ಟ್​ನಲ್ಲಿ ಮಹಿಳೆ ನಾಯಿಯನ್ನು ಕರೆದುಕೊಂಡು ಹೋಗುವಾಗ ಆ ಲಿಫ್ಟ್​ನಲ್ಲಿದ್ದ ಬಾಲಕನಿಗೆ ನಾಯಿ ಕಚ್ಚಿರುವ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು. ಗಜಿಯಾಬಾದ್‌ನ ರಾಜ್‌ನಗರ ಎಕ್ಸ್‌ಟೆನ್ಶನ್ ಚಾರ್ಮ್ಸ್ ಕೌಂಟಿ ಸೊಸೈಟಿಯಲ್ಲಿ ಸೆಪ್ಟೆಂಬರ್ 5ರಂದು ಸಂಜೆ 6 ಗಂಟೆಗೆ ಈ ಘಟನೆ ನಡೆದಿತ್ತು. ಮಹಿಳೆಯೊಂದಿಗೆ ಸಾಕು ನಾಯಿ ಲಿಫ್ಟ್‌ಗೆ ಪ್ರವೇಶಿಸಿದ್ದು, ಕೆಲವು ಸೆಕೆಂಡುಗಳ ನಂತರ ನಾಯಿ ಹಾರಿ ಹುಡುಗನನ್ನು ಕಚ್ಚುತ್ತದೆ. ಆದರೆ ಆಶ್ಚರ್ಯಕರ ಸಂಗತಿಯೆಂದರೆ, ನಾಯಿ ಕಚ್ಚಿದ್ದರಿಂದ ಭಯಗೊಂಡು ನೋವಿನಿಂದ ಅಳುತ್ತಿದ್ದ ಆ ಬಾಲಕನ ಬಗ್ಗೆ ತಲೆಯನ್ನೇ ಕೆಡಿಸಿಕೊಳ್ಳದ ಆ ಮಹಿಳೆ ತನ್ನ ನಾಯಿಯನ್ನು ಕರೆದುಕೊಂಡು ಲಿಫ್ಟ್​ನಿಂದ ಹೊರಗೆ ಹೋಗುತ್ತಾಳೆ.

ಇದನ್ನೂ ಓದಿ: Video Viral : ನಾಯಿಯೊಂದಿಗೆ ಸೆಲ್ಫಿಯಲ್ಲಿ ಮುಳುಗಿದ ಪೈಲಟ್, ವಿಳಂಬವಾಗಿ ಹಾರಿದ ವಿಮಾನ

ಈ ಸಿಸಿಟಿವಿ ದೃಶ್ಯಾವಳಿಯನ್ನು ಇಟ್ಟುಕೊಂಡು ಆ ಬಾಲಕನ ಪೋಷಕರು ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಕ್ರಮ ಕೈಗೊಂಡಿರುವ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಈ ಘಟನೆಯ ನಂತರ, ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಮಹಿಳೆಯ ಮನೆಗೆ ಹೋದಾಗ ಆ ಸಾಕು ನಾಯಿಯನ್ನು ರಿಜಿಸ್ಟರ್ ಮಾಡಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ, ಆಕೆಗೆ 5,000 ರೂ. ದಂಡ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ