AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ
ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 07, 2022 | 10:55 AM

Share

ಗಜಿಯಾಬಾದ್: ಹೌಸಿಂಗ್ ಸೊಸೈಟಿ ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ ಮಗುವಿಗೆ ನಾಯಿ (Pet Dog) ಕಚ್ಚಿದ ಹಿನ್ನೆಲೆಯಲ್ಲಿ ಆ ಸಾಕು ನಾಯಿಯ ಮಾಲೀಕರಾದ ಮಹಿಳೆಗೆ ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ 5,000 ರೂ. ದಂಡ ವಿಧಿಸಿದೆ. ಲಿಫ್ಟ್​ನಲ್ಲಿ ಮಹಿಳೆ ನಾಯಿಯನ್ನು ಕರೆದುಕೊಂಡು ಹೋಗುವಾಗ ಆ ಲಿಫ್ಟ್​ನಲ್ಲಿದ್ದ ಬಾಲಕನಿಗೆ ನಾಯಿ ಕಚ್ಚಿರುವ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು. ಗಜಿಯಾಬಾದ್‌ನ ರಾಜ್‌ನಗರ ಎಕ್ಸ್‌ಟೆನ್ಶನ್ ಚಾರ್ಮ್ಸ್ ಕೌಂಟಿ ಸೊಸೈಟಿಯಲ್ಲಿ ಸೆಪ್ಟೆಂಬರ್ 5ರಂದು ಸಂಜೆ 6 ಗಂಟೆಗೆ ಈ ಘಟನೆ ನಡೆದಿತ್ತು. ಮಹಿಳೆಯೊಂದಿಗೆ ಸಾಕು ನಾಯಿ ಲಿಫ್ಟ್‌ಗೆ ಪ್ರವೇಶಿಸಿದ್ದು, ಕೆಲವು ಸೆಕೆಂಡುಗಳ ನಂತರ ನಾಯಿ ಹಾರಿ ಹುಡುಗನನ್ನು ಕಚ್ಚುತ್ತದೆ. ಆದರೆ ಆಶ್ಚರ್ಯಕರ ಸಂಗತಿಯೆಂದರೆ, ನಾಯಿ ಕಚ್ಚಿದ್ದರಿಂದ ಭಯಗೊಂಡು ನೋವಿನಿಂದ ಅಳುತ್ತಿದ್ದ ಆ ಬಾಲಕನ ಬಗ್ಗೆ ತಲೆಯನ್ನೇ ಕೆಡಿಸಿಕೊಳ್ಳದ ಆ ಮಹಿಳೆ ತನ್ನ ನಾಯಿಯನ್ನು ಕರೆದುಕೊಂಡು ಲಿಫ್ಟ್​ನಿಂದ ಹೊರಗೆ ಹೋಗುತ್ತಾಳೆ.

ಇದನ್ನೂ ಓದಿ: Video Viral : ನಾಯಿಯೊಂದಿಗೆ ಸೆಲ್ಫಿಯಲ್ಲಿ ಮುಳುಗಿದ ಪೈಲಟ್, ವಿಳಂಬವಾಗಿ ಹಾರಿದ ವಿಮಾನ

ಈ ಸಿಸಿಟಿವಿ ದೃಶ್ಯಾವಳಿಯನ್ನು ಇಟ್ಟುಕೊಂಡು ಆ ಬಾಲಕನ ಪೋಷಕರು ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಕ್ರಮ ಕೈಗೊಂಡಿರುವ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಈ ಘಟನೆಯ ನಂತರ, ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಮಹಿಳೆಯ ಮನೆಗೆ ಹೋದಾಗ ಆ ಸಾಕು ನಾಯಿಯನ್ನು ರಿಜಿಸ್ಟರ್ ಮಾಡಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ, ಆಕೆಗೆ 5,000 ರೂ. ದಂಡ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ