AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು.

ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ; ಶ್ವಾನದ ಮಾಲೀಕರಿಗೆ 5,000 ರೂ. ದಂಡ
ಲಿಫ್ಟ್​ನಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 07, 2022 | 10:55 AM

ಗಜಿಯಾಬಾದ್: ಹೌಸಿಂಗ್ ಸೊಸೈಟಿ ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ ಮಗುವಿಗೆ ನಾಯಿ (Pet Dog) ಕಚ್ಚಿದ ಹಿನ್ನೆಲೆಯಲ್ಲಿ ಆ ಸಾಕು ನಾಯಿಯ ಮಾಲೀಕರಾದ ಮಹಿಳೆಗೆ ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ 5,000 ರೂ. ದಂಡ ವಿಧಿಸಿದೆ. ಲಿಫ್ಟ್​ನಲ್ಲಿ ಮಹಿಳೆ ನಾಯಿಯನ್ನು ಕರೆದುಕೊಂಡು ಹೋಗುವಾಗ ಆ ಲಿಫ್ಟ್​ನಲ್ಲಿದ್ದ ಬಾಲಕನಿಗೆ ನಾಯಿ ಕಚ್ಚಿರುವ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮಾಲೀಕರು ನಾಯಿಯನ್ನು ಲಿಫ್ಟ್​ನೊಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಅಲ್ಲಿದ್ದ ಬಾಲಕನನ್ನು ನೋಡಿ ಬೊಗಳಲಾರಂಭಿಸಿದ ನಾಯಿ ಆತನ ಕಾಲಿಗೆ ಕಚ್ಚಿತ್ತು. ಲಿಫ್ಟ್​ನಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ರೆಕಾರ್ಡ್ ಆಗಿತ್ತು. ಗಜಿಯಾಬಾದ್‌ನ ರಾಜ್‌ನಗರ ಎಕ್ಸ್‌ಟೆನ್ಶನ್ ಚಾರ್ಮ್ಸ್ ಕೌಂಟಿ ಸೊಸೈಟಿಯಲ್ಲಿ ಸೆಪ್ಟೆಂಬರ್ 5ರಂದು ಸಂಜೆ 6 ಗಂಟೆಗೆ ಈ ಘಟನೆ ನಡೆದಿತ್ತು. ಮಹಿಳೆಯೊಂದಿಗೆ ಸಾಕು ನಾಯಿ ಲಿಫ್ಟ್‌ಗೆ ಪ್ರವೇಶಿಸಿದ್ದು, ಕೆಲವು ಸೆಕೆಂಡುಗಳ ನಂತರ ನಾಯಿ ಹಾರಿ ಹುಡುಗನನ್ನು ಕಚ್ಚುತ್ತದೆ. ಆದರೆ ಆಶ್ಚರ್ಯಕರ ಸಂಗತಿಯೆಂದರೆ, ನಾಯಿ ಕಚ್ಚಿದ್ದರಿಂದ ಭಯಗೊಂಡು ನೋವಿನಿಂದ ಅಳುತ್ತಿದ್ದ ಆ ಬಾಲಕನ ಬಗ್ಗೆ ತಲೆಯನ್ನೇ ಕೆಡಿಸಿಕೊಳ್ಳದ ಆ ಮಹಿಳೆ ತನ್ನ ನಾಯಿಯನ್ನು ಕರೆದುಕೊಂಡು ಲಿಫ್ಟ್​ನಿಂದ ಹೊರಗೆ ಹೋಗುತ್ತಾಳೆ.

ಇದನ್ನೂ ಓದಿ: Video Viral : ನಾಯಿಯೊಂದಿಗೆ ಸೆಲ್ಫಿಯಲ್ಲಿ ಮುಳುಗಿದ ಪೈಲಟ್, ವಿಳಂಬವಾಗಿ ಹಾರಿದ ವಿಮಾನ

ಈ ಸಿಸಿಟಿವಿ ದೃಶ್ಯಾವಳಿಯನ್ನು ಇಟ್ಟುಕೊಂಡು ಆ ಬಾಲಕನ ಪೋಷಕರು ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಕ್ರಮ ಕೈಗೊಂಡಿರುವ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಈ ಘಟನೆಯ ನಂತರ, ಗಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಮಹಿಳೆಯ ಮನೆಗೆ ಹೋದಾಗ ಆ ಸಾಕು ನಾಯಿಯನ್ನು ರಿಜಿಸ್ಟರ್ ಮಾಡಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ, ಆಕೆಗೆ 5,000 ರೂ. ದಂಡ ವಿಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP