AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಈ ಭಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಅಖಾಡದಲ್ಲಿ ಪ್ರಚಾರ ನಡೆಸಿದ್ರು. ಆದ್ರೆ ಆಗಿರೋ ಮತದಾನ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 03, 2020 | 6:41 AM

Share

ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯು ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅನೇಕ ಘಟನಾಘಟಿಗಳು ಹೈದರಾಬಾದ್ ಗೆ ಭೇಟಿ ನೀಡಿ, ಪ್ರಚಾರ ಮಾಡಿದ್ದರಿಂದ ಜನರ ಮೇಲೆ ಭಾರಿ ಪರಿಣಾಮ ಬೀರಲಿದೆ.

ಮತದಾರರು ಘಟಾನುಘಟಿಗಳ ಪ್ರಭಾವಕ್ಕೆ ಒಳಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬಹುದು ಎನ್ನಲಾಗಿತ್ತು. ಆದ್ರೆ, ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಹೈದರಾಬಾದ್ ಮಹಾನಗರ ಪಾಲಿಕೆಗೆ ನಡೆದ ಎಲೆಕ್ಷನ್‌ನಲ್ಲಿ ಶೇಕಡಾ 46.68ರಷ್ಟು ಮಾತ್ರ ಮತದಾನವಾಗಿದೆ. ಶೇಕಡಾ 50ರಷ್ಟನ್ನು ಸಹ ದಾಟದಿರೋದು ಅನೇಕರ ಅಚ್ಚರಿಗೆ ಕಾರಣವಾಗಿದೆ. ಇದೇ, 4 ರಂದು ಈ ಮತದಾನದ ಫಲಿತಾಂಶ ಹೊರ ಬೀಳಲಿದ್ದು, ಯಾರ ಪರ ಮತದಾರರು ಹಣೆಬರಹ ಬರೆದಿದ್ದಾರೆ ಎನ್ನೋದು ಗೊತ್ತಾಗಲಿದೆ.

ಇಂದು ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಮರುಮತದಾನ ತಾಂತ್ರಿಕ ದೋಷದಿಂದ ಮತಯಂತ್ರಗಳು ಕೈಕೊಟ್ಟಿದ್ದಕ್ಕೆ ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಇಂದು ಮರುಮತದಾನ ನಡೆಯಲಿದೆ. ಹಳೇ ಮಲಕ್​ಪೇಟೆಯಲ್ಲಿ 54,655 ಮತದಾರರಿದ್ದು, 27,889 ಪುರುಷರು, 26,763 ಮಹಿಳಾ ಮತದಾರರಿದ್ದಾರೆ. ಮತದಾನಕ್ಕಾಗಿ 69 ಮತಗಟ್ಟೆಗಳನ್ನ ತೆರೆಯಲಾಗಿದೆ.

ಒಟ್ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನ ನಿರೀಕ್ಷೆಯಂತೆ ಆಗಿಲ್ಲ. ಈ ಕಡಿಮೆ ಮತದಾನ ಆಗಿರೋದು ಯಾರಿಗೆ ವರವಾಗಲಿದೆ, ಯಾರಿಗೆ ಶಾಪ ಆಗಲಿದೆ ಅನ್ನೋದು ನಾಳೆ ಗೊತ್ತಾಗಲಿದೆ.

Follow Us
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ