AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಈ ಭಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಅಖಾಡದಲ್ಲಿ ಪ್ರಚಾರ ನಡೆಸಿದ್ರು. ಆದ್ರೆ ಆಗಿರೋ ಮತದಾನ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಯಾರ ಪಾಲಾಗುತ್ತೆ ಹೈದರಾಬಾದ್​ ಮಹಾನಗರ ಪಾಲಿಕೆ? ನಾಳೆ 150 ವಾರ್ಡ್​ಗಳ ಮತ ಎಣಿಕೆ
ಆಯೇಷಾ ಬಾನು
|

Updated on: Dec 03, 2020 | 6:41 AM

Share

ಹೈದರಾಬಾದ್: ತೆಲಂಗಾಣದ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯು ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅನೇಕ ಘಟನಾಘಟಿಗಳು ಹೈದರಾಬಾದ್ ಗೆ ಭೇಟಿ ನೀಡಿ, ಪ್ರಚಾರ ಮಾಡಿದ್ದರಿಂದ ಜನರ ಮೇಲೆ ಭಾರಿ ಪರಿಣಾಮ ಬೀರಲಿದೆ.

ಮತದಾರರು ಘಟಾನುಘಟಿಗಳ ಪ್ರಭಾವಕ್ಕೆ ಒಳಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬಹುದು ಎನ್ನಲಾಗಿತ್ತು. ಆದ್ರೆ, ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಹೈದರಾಬಾದ್ ಮಹಾನಗರ ಪಾಲಿಕೆಗೆ ನಡೆದ ಎಲೆಕ್ಷನ್‌ನಲ್ಲಿ ಶೇಕಡಾ 46.68ರಷ್ಟು ಮಾತ್ರ ಮತದಾನವಾಗಿದೆ. ಶೇಕಡಾ 50ರಷ್ಟನ್ನು ಸಹ ದಾಟದಿರೋದು ಅನೇಕರ ಅಚ್ಚರಿಗೆ ಕಾರಣವಾಗಿದೆ. ಇದೇ, 4 ರಂದು ಈ ಮತದಾನದ ಫಲಿತಾಂಶ ಹೊರ ಬೀಳಲಿದ್ದು, ಯಾರ ಪರ ಮತದಾರರು ಹಣೆಬರಹ ಬರೆದಿದ್ದಾರೆ ಎನ್ನೋದು ಗೊತ್ತಾಗಲಿದೆ.

ಇಂದು ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಮರುಮತದಾನ ತಾಂತ್ರಿಕ ದೋಷದಿಂದ ಮತಯಂತ್ರಗಳು ಕೈಕೊಟ್ಟಿದ್ದಕ್ಕೆ ಹಳೇ ಮಲಕ್​ಪೇಟೆ ಪ್ರದೇಶದಲ್ಲಿ ಇಂದು ಮರುಮತದಾನ ನಡೆಯಲಿದೆ. ಹಳೇ ಮಲಕ್​ಪೇಟೆಯಲ್ಲಿ 54,655 ಮತದಾರರಿದ್ದು, 27,889 ಪುರುಷರು, 26,763 ಮಹಿಳಾ ಮತದಾರರಿದ್ದಾರೆ. ಮತದಾನಕ್ಕಾಗಿ 69 ಮತಗಟ್ಟೆಗಳನ್ನ ತೆರೆಯಲಾಗಿದೆ.

ಒಟ್ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನ ನಿರೀಕ್ಷೆಯಂತೆ ಆಗಿಲ್ಲ. ಈ ಕಡಿಮೆ ಮತದಾನ ಆಗಿರೋದು ಯಾರಿಗೆ ವರವಾಗಲಿದೆ, ಯಾರಿಗೆ ಶಾಪ ಆಗಲಿದೆ ಅನ್ನೋದು ನಾಳೆ ಗೊತ್ತಾಗಲಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ