AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Democratic Azad Party: ಹೊಸ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್

ಗುಲಾಂ ನಬಿ ಆಜಾದ್ ಅವರು ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ಡೆಮಾಕ್ರಟಿಕ್ ಆಜಾದ್ ಪಾರ್ಟಿ ಎಂದು ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ

Democratic Azad Party: ಹೊಸ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 26, 2022 | 1:35 PM

Share

ಶ್ರೀನಗರ:  ಕಾಂಗ್ರೆಸ್‌ನಿಂದ ನಿರ್ಗಮಿಸಿ ಸುಮಾರು ಒಂದು ತಿಂಗಳ ನಂತರ ಹಿರಿಯ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad) ಸೋಮವಾರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದು, ಹೊಸ ಪಕ್ಷದ ಹೆಸರು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ (Democratic Azad Party)ಎಂದು ಹೇಳಿದ್ದಾರೆ. ನಮ್ಮ ಪಕ್ಷಕ್ಕೆ “ವಯಸ್ಸಿನ ಮಿತಿಯಿಲ್ಲ” ಎಂದು ಒತ್ತಿ ಹೇಳಿದ ಆಜಾದ್ ಯುವಕರು ಮತ್ತು ಹಿರಿಯರು ಪಕ್ಷದಲ್ಲಿ ಸಹಬಾಳ್ವೆ ನಡೆಸುತ್ತಾರೆ ಎಂದು ಹೇಳಿದ್ದಾರೆ, ಆಜಾದ್ ಅವರು ಆಗಸ್ಟ್ 26 ರಂದು ಕಾಂಗ್ರೆಸ್ (Congress) ಜೊತೆಗಿನ ದಶಕಗಳ ಕಾಲದ ಒಡನಾಟವನ್ನು ಕೊನೆಗೊಳಿಸಿ ರಾಜೀನಾಮೆ ನೀಡಿದ್ದರು. ನನ್ನ ಹೊಸ ಪಕ್ಷಕ್ಕಾಗಿ ಸುಮಾರು 1,500 ಹೆಸರುಗಳನ್ನು ಉರ್ದು, ಸಂಸ್ಕೃತದಲ್ಲಿ ನಮಗೆ ಕಳುಹಿಸಲಾಗಿದೆ. ಹಿಂದಿ ಮತ್ತು ಉರ್ದು ಮಿಶ್ರಿತ ಪದ’ಹಿಂದೂಸ್ತಾನಿ’. ಪಕ್ಷದ ಹೆಸರು ಪ್ರಜಾಸತ್ತಾತ್ಮಕ, ಶಾಂತಿಯುತ ಮತ್ತು ಸ್ವತಂತ್ರವಾಗಿರಬೇಕು ಎಂದು ನಾವು ಬಯಸಿದ್ದೇವೆ ಎಂದು ಆಜಾದ್ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಧ್ವಜ ಅನಾವರಣ

ಸಾಸಿವೆ, ಬಿಳಿ ಮತ್ತು ನೀಲಿ ಎಂಬ ಮೂರು ಬಣ್ಣಗಳನ್ನು ಹೊಂದಿರುವ ಪಕ್ಷದ ಧ್ವಜವನ್ನು ಅಜಾದ್ ಬಿಡುಗಡೆ ಮಾಡಿದ್ದಾರೆ. ಸಾಸಿವೆ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ, ಬಿಳಿ ಶಾಂತಿಯನ್ನು ಸೂಚಿಸುತ್ತದೆ ಮತ್ತು ನೀಲಿ ಸ್ವಾತಂತ್ರ್ಯ, ಮುಕ್ತ ಸ್ಥಳ, ಕಲ್ಪನೆ ಮತ್ತು ಸಮುದ್ರದ ಆಳದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ತೊರೆದ ನಂತರ  ಜಮ್ಮುವಿನಲ್ಲಿ ನಡೆದ ಮೊದಲ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಆಜಾದ್ , ಸಂಪೂರ್ಣ ರಾಜ್ಯತ್ವದ ಮರುಸ್ಥಾಪನೆಯ ಮೇಲೆ ಕೇಂದ್ರೀಕರಿಸುವ ತನ್ನದೇ ಆದ ರಾಜಕೀಯ ಸಂಘಟನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಐದು ದಶಕಗಳ ಕಾಲದ ಒಡನಾಟವನ್ನು ಮುರಿದುಕೊಂಡ ನಂತರ ಮಾತನಾಡಿದ ಆಜಾದ್, ನನ್ನ ಪಕ್ಷವು ಪೂರ್ಣ ರಾಜ್ಯತ್ವ, ಭೂಮಿಯ ಹಕ್ಕು ಮತ್ತು ಸ್ಥಳೀಯ ನಿವಾಸಕ್ಕೆ ಉದ್ಯೋಗವನ್ನು ಮರುಸ್ಥಾಪಿಸುವತ್ತ ಗಮನ ಹರಿಸುತ್ತದೆ ಎಂದು ಹೇಳಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ರಾಜಕೀಯ ಸಂಘಟನೆಯ ಮೊದಲ ಘಟಕವನ್ನು ರಚಿಸಲಾಗುವುದು ಎಂದ ಆಜಾದ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಜನರು ನಮ್ಮ (ನಾನು ಮತ್ತು ಪಕ್ಷ ತೊರೆದ ನನ್ನ ಬೆಂಬಲಿಗರ) ಮಾನಹಾನಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ವ್ಯಾಪ್ತಿಯು ಕಂಪ್ಯೂಟರ್ ಟ್ವೀಟ್‌ಗಳಿಗೆ ಸೀಮಿತವಾಗಿದೆ. ಕಾಂಗ್ರೆಸ್ ಅನ್ನು ನಾವು ನಮ್ಮ ರಕ್ತದಿಂದ ನಿರ್ಮಿಸಿದ್ದೇವೆ, ಕಂಪ್ಯೂಟರ್‌ಗಳಿಂದ ಅಲ್ಲ, ಟ್ವಿಟರ್‌ನಿಂದ ಅಲ್ಲ. ಜನರು ನಮ್ಮನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ವ್ಯಾಪ್ತಿಯು ಕಂಪ್ಯೂಟರ್ ಮತ್ತು ಟ್ವೀಟ್‌ಗಳಿಗೆ ಸೀಮಿತವಾಗಿದೆ. ಅದಕ್ಕಾಗಿಯೇ ಕಾಂಗ್ರೆಸ್ ಎಲ್ಲಿಯೂ ನೆಲೆ ಕಾಣುವುದಿಲ್ಲ ಎಂದಿದ್ದಾರೆ.

Published On - 12:45 pm, Mon, 26 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!