AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್

Ghulam Nabi Azad: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. 

BIG NEWS: ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಜಾದ್
Ghulam Nabi Azad
TV9 Web
| Edited By: |

Updated on:Aug 26, 2022 | 12:15 PM

Share

ದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ (Congress Leader), ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ (Ghulam Nabi Azad) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೂ ಶುಕ್ರವಾರ (ಆಗಸ್ಟ್ 26) ರಾಜೀನಾಮೆ ನೀಡಿದ್ದಾರೆ. ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಪಕ್ಷವು ‘ಸುಧಾರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ’ ಎಂದು ಬರೆದಿದ್ದಾರೆ.

ಇತ್ತೀಚೆಗಷ್ಟೇ ಅವರು ಆರೋಗ್ಯದ ಕಾರಣ ಮುಂದಿಟ್ಟು ಜಮ್ಮು ಮತ್ತು ಕಾಶ್ಮೀರ ಘಟಕದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನವನ್ನು ಮತ್ತೆ ಹೊರಹಾಕಿದ್ದರು. ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ (JKCC) ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು.

ಈ ನೇಮಕಾತಿಯ ಬಗ್ಗೆ ಆಜಾದ್ ಅಸಮಾಧಾನ ಹೊಂದಿದ್ದರು. ಕಾಂಗ್ರೆಸ್​ನ ರಾಷ್ಟ್ರೀಯ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರಾಗಿದ್ದ ಅವರು ರಾಜ್ಯಮಟ್ಟದ ಸಮಿತಿಗೆ ನೇಮಿಸಿದ್ದನ್ನು ಹಿಂಬಡ್ತಿ (demotion) ಎಂದೇ ಪರಿಗಣಸಿದ್ದರು. ತಮ್ಮ ರಾಜೀನಾಮೆಗೆ ಆರೋಗ್ಯದ ಕಾರಣಗಳನ್ನು ಆಜಾದ್ ಮುಂದಿಟ್ಟಿದ್ದಾರೆ. ಆದರೆ ಅವರ ರಾಜೀನಾಮೆಯ ನಿಜವಾದ ಕಾರಣಗಳು ಬೇರೆಯೇ ಇವೆ ಎಂದು ರಾಜಕೀಯ ಮೂಲಗಳು ತಿಳಿಸಿದ್ದವು.

ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಗೆ ಗುಲಾಂ ನಬಿ ಆಜಾದ್ ಅವರ ಆಪ್ತ ಗುಲಾಂ ಅಹ್ಮದ್‌ ಮಿರ್‌ ಈ ಹಿಂದೆ ಅಧ್ಯಕ್ಷರಾಗಿದ್ದರು. ಜುಲೈ 6ರಂದು ಮಿರ್‌ ಸಲ್ಲಿಸಿದ್ದ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅಂಗೀಕರಿಸಿದ್ದರು. ನಿನ್ನೆಯಷ್ಟೇ ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಗೆ ಹೊಸ ಅಧ್ಯಕ್ಷರಾಗಿ ವಿಕರ್ ರಸೂಲ್ ವಾನಿ ಅವರನ್ನು ನೇಮಿಸಲಾಗಿತ್ತು. ಈ ಬೆಳವಣಿಗೆಯೂ ಗುಲಾಂ ನಬಿ ಆಜಾದ್ ಅವರಿಗೆ ಸರಿಕಂಡಿರಲಿಲ್ಲ.

ಈ ಮೊದಲು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಗೆ ಗುಲಾಂ ನಬಿ ಆಜಾದ್ ಅವರನ್ನೇ ಅಧ್ಯಕ್ಷರಾಗಿ ನೇಮಿಸಲಾಗುವುದು ಎಂಬ ಮಾತುಗಳು ಹರಿದಾಡುತ್ತಿದ್ದವು. ಆಜಾದ್ ಅಧ್ಯಕ್ಷರಾಗಿ ಮತ್ತು ತಾರಿಕ್ ಹಮೀದ್ ಕರ್ ಉಪಾಧ್ಯಕ್ಷರಾಗಿ 11 ಸದಸ್ಯರನ್ನು ಒಳಗೊಂಡ ಪ್ರಚಾರ ಸಮಿತಿಯನ್ನು ಕಾಂಗ್ರೆಸ್‌ ರಚಿಸಿತ್ತು. ಆದರೆ, ಪಿಸಿಸಿ ಮುಖ್ಯಸ್ಥರ ನೇಮಕ ಮಾಡಿರುವುದು ಪಕ್ಷದ ಅನೇಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆಜಾದ್ ಅವರೇ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಏಕಾಏಕಿ ಈ ತೀರ್ಮಾನ ಬದಲಾಗಿತ್ತು.

(ಹೆಚ್ಚಿನ ಮಾಹಿತಿ ನೀಡಲಾಗುವುದು)

Published On - 11:41 am, Fri, 26 August 22

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ