AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾರಂತಹ ಉತ್ತಮ ನಾಯಕನನ್ನು ಕಳೆದುಕೊಂಡಿದ್ದು ಹೇಗೆ? ಆಜಾದ್ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳಿವು

ಒಂದು ಕಾಲದಲ್ಲಿ ಇಡೀ ಈಶಾನ್ಯ ರಾಜ್ಯಗಳನ್ನು ಆಳಿದ್ದ ಕಾಂಗ್ರೆಸ್ (Congress)ಇಂದು ಬಹುತೇಕ ಪ್ರದೇಶಗಳಲ್ಲಿ ಹೇಳ ಹೆಸರಿಲ್ಲದಂತಾಗಿದೆ.

ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾರಂತಹ ಉತ್ತಮ ನಾಯಕನನ್ನು ಕಳೆದುಕೊಂಡಿದ್ದು ಹೇಗೆ? ಆಜಾದ್ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳಿವು
ಗುಲಾಂ ನಬಿ ಆಜಾದ್Image Credit source: Zee News
ನಯನಾ ರಾಜೀವ್
|

Updated on: Mar 24, 2023 | 11:35 AM

Share

ಒಂದು ಕಾಲದಲ್ಲಿ ಇಡೀ ಈಶಾನ್ಯ ರಾಜ್ಯಗಳನ್ನು ಆಳಿದ್ದ ಕಾಂಗ್ರೆಸ್ (Congress)ಇಂದು ಬಹುತೇಕ ಪ್ರದೇಶಗಳಲ್ಲಿ ಹೇಳ ಹೆಸರಿಲ್ಲದಂತಾಗಿದೆ. ಈ ಪತನದ ಆರಂಭವು ಅಸ್ಸಾಂನ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್​ ತೊರೆದಾಗಿನಿಂದ ಶುರುವಾಗಿತ್ತು. ಗುಲಾಂ ನಬಿ ಆಜಾದ್ (Ghulam Nabi Aza)ತಮ್ಮ ಆತ್ಮಚರಿತ್ರೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ತೊರೆಯಲು ಇದ್ದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಆಗಸ್ಟ್ 2022 ರಲ್ಲಿ ತಮ್ಮದೇ ಪಕ್ಷವನ್ನು ಪ್ರಾರಂಭಿಸಲು ಕಾಂಗ್ರೆಸ್ ತೊರೆದ ಆಜಾದ್, ಸೋನಿಯಾ ಗಾಂಧಿಯನ್ನೂ ಎದುರು ಹಾಕಿಕೊಂಡರು.

ಹಿಮಂತ ಬಿಸ್ವಾ ಶರ್ಮಾ ಅವರಿಗೆ ಬಹುಪಾಲು ಶಾಸಕರ ಬೆಂಬಲವಿದ್ದು, ಬಂಡಾಯವೆದ್ದು ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಿದಾಗ ರಾಹುಲ್ ಗಾಂಧಿ ಹೋದರೆ ‘ಹೋಗಲಿ ಬಿಡಿ’ ಎಂದು ಹೇಳಿದ್ದರು ಎಂದು ಜೀವನಚರಿತ್ರೆಯಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ

ಅಸ್ಸಾಂನಲ್ಲಿ ಕಾಂಗ್ರೆಸ್​ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳಿಂದ ಅವರು ಸೆಪ್ಟೆಂಬರ್ 2015ರಲ್ಲಿ ಪಕ್ಷವನ್ನು ತೊರೆದಾಗ ಹತ್ತು ಶಾಸಕರು ಅವರಿಗೆ ಬೆಂಬಲ ನೀಡಿದ್ದರು. ರಾಜ್ಯದಲ್ಲಿ ಎರಡನೇ ಸತತ ಗೆಲುವನ್ನು ಸಾಧಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದರು. ಕಾಂಗ್ರೆಸ್ ತೊರೆದು ಕೇವಲ 5 ವರ್ಷಗಳ ನಂತರ 2021ರಲ್ಲಿ ಮುಖ್ಯಮಂತ್ರಿಯಾದರು.

ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಚಾಲಕರಾಗಿರುವ ಹಿಮಂತ ಶರ್ಮಾ ಅವರು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಶ್ರದ್ಧೆಯಿಂದ ಕೆಲಸ ಮಾಡಿದರು ಮತ್ತು ಈ ಪ್ರದೇಶದಲ್ಲಿ ಬಿಜೆಪಿ ತನ್ನ ನೆಲೆಯನ್ನು ಬಲಪಡಿಸಲು ಸಹಾಯ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌