Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾರಂತಹ ಉತ್ತಮ ನಾಯಕನನ್ನು ಕಳೆದುಕೊಂಡಿದ್ದು ಹೇಗೆ? ಆಜಾದ್ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳಿವು

ಒಂದು ಕಾಲದಲ್ಲಿ ಇಡೀ ಈಶಾನ್ಯ ರಾಜ್ಯಗಳನ್ನು ಆಳಿದ್ದ ಕಾಂಗ್ರೆಸ್ (Congress)ಇಂದು ಬಹುತೇಕ ಪ್ರದೇಶಗಳಲ್ಲಿ ಹೇಳ ಹೆಸರಿಲ್ಲದಂತಾಗಿದೆ.

ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾರಂತಹ ಉತ್ತಮ ನಾಯಕನನ್ನು ಕಳೆದುಕೊಂಡಿದ್ದು ಹೇಗೆ? ಆಜಾದ್ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳಿವು
ಗುಲಾಂ ನಬಿ ಆಜಾದ್Image Credit source: Zee News
Follow us
ನಯನಾ ರಾಜೀವ್
|

Updated on: Mar 24, 2023 | 11:35 AM

ಒಂದು ಕಾಲದಲ್ಲಿ ಇಡೀ ಈಶಾನ್ಯ ರಾಜ್ಯಗಳನ್ನು ಆಳಿದ್ದ ಕಾಂಗ್ರೆಸ್ (Congress)ಇಂದು ಬಹುತೇಕ ಪ್ರದೇಶಗಳಲ್ಲಿ ಹೇಳ ಹೆಸರಿಲ್ಲದಂತಾಗಿದೆ. ಈ ಪತನದ ಆರಂಭವು ಅಸ್ಸಾಂನ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್​ ತೊರೆದಾಗಿನಿಂದ ಶುರುವಾಗಿತ್ತು. ಗುಲಾಂ ನಬಿ ಆಜಾದ್ (Ghulam Nabi Aza)ತಮ್ಮ ಆತ್ಮಚರಿತ್ರೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್ ತೊರೆಯಲು ಇದ್ದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಆಗಸ್ಟ್ 2022 ರಲ್ಲಿ ತಮ್ಮದೇ ಪಕ್ಷವನ್ನು ಪ್ರಾರಂಭಿಸಲು ಕಾಂಗ್ರೆಸ್ ತೊರೆದ ಆಜಾದ್, ಸೋನಿಯಾ ಗಾಂಧಿಯನ್ನೂ ಎದುರು ಹಾಕಿಕೊಂಡರು.

ಹಿಮಂತ ಬಿಸ್ವಾ ಶರ್ಮಾ ಅವರಿಗೆ ಬಹುಪಾಲು ಶಾಸಕರ ಬೆಂಬಲವಿದ್ದು, ಬಂಡಾಯವೆದ್ದು ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಿದಾಗ ರಾಹುಲ್ ಗಾಂಧಿ ಹೋದರೆ ‘ಹೋಗಲಿ ಬಿಡಿ’ ಎಂದು ಹೇಳಿದ್ದರು ಎಂದು ಜೀವನಚರಿತ್ರೆಯಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಓದಿ: Rahul Gandhi: ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಮನವಿ

ಅಸ್ಸಾಂನಲ್ಲಿ ಕಾಂಗ್ರೆಸ್​ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯಗಳಿಂದ ಅವರು ಸೆಪ್ಟೆಂಬರ್ 2015ರಲ್ಲಿ ಪಕ್ಷವನ್ನು ತೊರೆದಾಗ ಹತ್ತು ಶಾಸಕರು ಅವರಿಗೆ ಬೆಂಬಲ ನೀಡಿದ್ದರು. ರಾಜ್ಯದಲ್ಲಿ ಎರಡನೇ ಸತತ ಗೆಲುವನ್ನು ಸಾಧಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದರು. ಕಾಂಗ್ರೆಸ್ ತೊರೆದು ಕೇವಲ 5 ವರ್ಷಗಳ ನಂತರ 2021ರಲ್ಲಿ ಮುಖ್ಯಮಂತ್ರಿಯಾದರು.

ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಚಾಲಕರಾಗಿರುವ ಹಿಮಂತ ಶರ್ಮಾ ಅವರು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಶ್ರದ್ಧೆಯಿಂದ ಕೆಲಸ ಮಾಡಿದರು ಮತ್ತು ಈ ಪ್ರದೇಶದಲ್ಲಿ ಬಿಜೆಪಿ ತನ್ನ ನೆಲೆಯನ್ನು ಬಲಪಡಿಸಲು ಸಹಾಯ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ