AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!

Temple Lift: ದೇವಸ್ಥಾನದ ಅರ್ಚಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂತ್ರಜ್ಞಾನ ಬಳಸಿ ತಕ್ಷಣ ಬಂಧಿಸಿದ್ದಾರೆ. ಆರೋಪಿಯು ತಿರುಗಿದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಳ್ಳ ಹೋದ ದಿಕ್ಕನ್ನು ಗುರುತಿಸಿದ್ದಾರೆ.

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!
ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!
TV9 Web
| Edited By: |

Updated on: Jul 20, 2022 | 8:27 PM

Share

ಪ್ರಕಾಶಂ ಜಿಲ್ಲೆಯ ಗಿಡ್ಡಲೂರಿನಲ್ಲಿ ಕೇವಲ ಎರಡು ಗಂಟೆಯಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸುವ ಮೂಲಕ ಪ್ರಕಾಶಂ ಜಿಲ್ಲೆಯ ಪೊಲೀಸರು (Prakasam district police) ದಾಖಲೆ ಮಾಡಿದ್ದಾರೆ. ಗಿಡ್ಡಲೂರು ಮಂಡಲದ ಮಕಿಟ್ಟಮೀದಪಲ್ಲಿ ಗ್ರಾಮದ ಬಳಿ ಇರುವ ಕಾಸಿನಾಯನ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದರು (temple lift). ದೇವಸ್ಥಾನದ ಒಳಗಿದ್ದ ಕಾಶಿನಾಯನ ಪಂಚಲೋಹ ಮೂರ್ತಿ ಹಾಗೂ ದೇವಸ್ಥಾನದ ಹೊರಗಿದ್ದ ಕಮಾಂಡರ್ ಜೀಪನ್ನು ಕಳ್ಳರು ಕದ್ದೊಯ್ದಿದ್ದಾರೆ.

ದೇವಸ್ಥಾನದ ಅರ್ಚಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂತ್ರಜ್ಞಾನ ಬಳಸಿ ತಕ್ಷಣ ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಯು ತಿರುಗಿದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಳ್ಳರ ಜಾಡು ಗುರುತಿಸಿದ್ದಾರೆ. ಆದರೆ, ಪೊಲೀಸರು ತಮ್ಮನ್ನು ಗುರುತಿಸುತ್ತಾರೆ ಎಂಬ ಭಯದಿಂದ ಆರೋಪಿಗಳು ಪೆದ್ದರವೀಡು ಗ್ರಾಮದ ಬಳಿ ಜೀಪನ್ನು ಬಿಟ್ಟು ಓಡಿ ಹೋಗಿದ್ದಾರೆ.

ಸ್ಥಳಕ್ಕಾಗಮಿಸಿದ ಇನ್ಸ್​ಪೆಕ್ಟರ್​​ ಫಿರೋಜ್ ಹಾಗೂ ಎಸ್‌ಐ ಬ್ರಹ್ಮಾನಾಯ್ಡು ಕಳ್ಳತನವಾಗಿದ್ದ ದೇಗುಲದ ಮಾಲನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಳಿಕ ವಸ್ತುಗಳನ್ನು ದೇಗುಲದ ಆಡಳಿತದವರಿಗೆ ಹಸ್ತಾಂತರಿಸಲಾಗಿದೆ. ಕಳ್ಳತನ ಪ್ರಕರಣವನ್ನು ತ್ವರಿತವಾಗಿ ಭೇದಿಸಿ ಕದ್ದ ವಸ್ತುಗಳನ್ನು ಹಿಂದಿರುಗಿಸಿದ ಪೊಲೀಸರಿಗೆ ದೇಗುಲದವರು ಕೃತಜ್ಞತೆ ಸಲ್ಲಿಸಿದರು.

ಕಳ್ಳರು ಎಲ್ಲಿಂದ ಬಂದರು.. ಯಾವ ಏರಿಯಾದವರು..? ಹೊರಗಿನಿಂದ ಬಂದಿದ್ದರಾ? ಈ ಕುರಿತು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಳ್ಳರಿಗಾಗಿ ಸಿಬ್ಬಂದಿ ತೀವ್ರ ಶೋಧ ನಡೆದಿದೆ. ಆರೋಪಿಗಳನ್ನು ಶೀಘ್ರವೇ ಹಿಡಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

To read in Telugu click here

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ