AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಕ್ ಹರಾಮ್’ಗಳ ಮತಗಳು ಬೇಕಿಲ್ಲ: ಬಿಹಾರದಲ್ಲಿ ಗಿರಿರಾಜ್ ಸಿಂಗ್ ಗುಡುಗು; ಮುಸ್ಲಿಮರನ್ನು ಕುಟುಕಿದ ಮಾಡಿದ ಕೇಂದ್ರ ಸಚಿವ

Giriraj Singh says he doesn't need votes of namak haraams: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮುಸ್ಲಿಮರನ್ನು ನಮಕ್ ಹರಾಮ್​ಗಳೆಂದು ಕರೆದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಪಡೆದರೂ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂದು ಗಿರಿರಾಜ್ ಟೀಕಿಸಿದ್ದಾರೆ. ಲಾಭ ಪಡೆದು ಮತ ಹಾಕದವರು ನಮಕ್ ಹರಾಮ್​ಗಳು ಎಂದು ಮುಸ್ಲಿಮರ ವಿರುದ್ಧ ನೇರವಾಗಿಯೇ ಅವರು ವಾಗ್ದಾಳಿ ಮಾಡಿದ್ದಾರೆ.

‘ನಮಕ್ ಹರಾಮ್’ಗಳ ಮತಗಳು ಬೇಕಿಲ್ಲ: ಬಿಹಾರದಲ್ಲಿ ಗಿರಿರಾಜ್ ಸಿಂಗ್ ಗುಡುಗು; ಮುಸ್ಲಿಮರನ್ನು ಕುಟುಕಿದ ಮಾಡಿದ ಕೇಂದ್ರ ಸಚಿವ
ಗಿರಿರಾಜ್ ಸಿಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 19, 2025 | 9:27 PM

Share

ಪಾಟ್ನಾ, ಅಕ್ಟೋಬರ್ 19: ಹರಿತವಾದ ವಾಗ್ದಾಳಿಗಳಿಗೆ ಹೆಸರಾಗಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ಬಿಹಾರ ಚುನಾವಣಾ ಪ್ರಚಾರದ (Bihar elections) ವೇಳೆ ವಿವಾದಾತ್ಮಕ ಎನಿಸುವ ಹೇಳಿಕೆ ನೀಡಿದ್ದಾರೆ. ಬಿಹಾರದ ಅರವಾಲ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಭಾಷಣ ಮಾಡಿದ ಗಿರಿರಾಜ್ ಸಿಂಗ್, ಈ ವೇಳೆ ತನಗೆ ನಮಕ್ ಹರಾಮ್​ಗಳ (ನಂಬಿಕೆ ದ್ರೋಹಿಗಳು) ಮತ ಬೇಕಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರದ ಸೌಲಭ್ಯ ಪಡೆದರೂ ಬಿಜೆಪಿಗೆ ಮತ ಹಾಕದ ಮುಸ್ಲಿಮರನ್ನು ಗಿರಿರಾಜ್ ಸಿಂಗ್ ನಮಕ್ ಹರಾಮ್​ಗಳೆಂದು ಸಂಬೋಧಿಸಿದ್ದರು.

‘ನಿಮಗೆ ಆಯುಷ್ಮಾನ್ ಭಾರತ್ ಕಾರ್ಡ್ ಇದೆಯಾ ಎಂದು ಮೌಲ್ವಿಯೊಬ್ಬರನ್ನು (ಮುಸ್ಲಿಂ ಪೂಜಾರಿ) ಒಮ್ಮೆ ಕೇಳಿದೆ. ಅದಕ್ಕೆ ಅವರು ಹೌದೆಂದರು. ಈ ಕಾರ್ಡ್​ಗಳನ್ನು ಹಿಂದೂ ಮತ್ತು ಮುಸ್ಲಿಮ್ ಎಂದು ನೋಡಿ ಕೊಡಲಾಯಿತೆ ಎಂದು ಕೇಳಿದೆ. ಇಲ್ಲ ಎಂದರು. ನೀವು ನನಗೆ ಮತ ಹಾಕಿದ್ದೀರಾ ಎಂದು ಕೇಳಿದೆ. ಹೌದು ಎಂದರು. ಖುದಾ (ದೇವರು) ಮೇಲೆ ಆಣೆ ಮಾಡಿ ಹೇಳಲು ತಿಳಿಸಿದೆ. ಅದಕ್ಕೆ ಅವರು ಇಲ್ಲ ಎಂದರು’ ಎಂದು ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಗಿರಿರಾಜ್ ಸಿಂಗ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ

‘ಕೇಂದ್ರದ ಎಲ್ಲಾ ಯೋಜನೆಗಳ ಲಾಭವನ್ನು ಮುಸ್ಲಿಮರು ಪಡೆಯುತ್ತಾರೆ. ಆದರೆ, ವೋಟ್ ಮಾತ್ರ ಹಾಕುವುದಿಲ್ಲ. ಇಂಥ ಜನರನ್ನು ನಮಕ್ ಹರಾಮ್ ಎಂದು ಕರೆಯಲಾಗುತ್ತದೆ. ನಾನು ಆ ಮೌಲ್ವಿ ಸಾಹೇಬರಿಗೆ ಹೇಳಿದೆ, ನಮಗೆ ನಮಕ್ ಹರಾಮ್​ಗಳ ಮತ ಬೇಕಿಲ್ಲ’ ಎಂದು ಗಿರಿರಾಜ್ ಸಿಂಗ್ ತಿಳಿಸಿದ್ದಾರೆ.

‘ಬಿಹಾರದಲ್ಲಿ ಸಮಗ್ರ ಅಭಿವೃದ್ಧಿಗಾಗಿ ಎನ್​ಡಿಎ ವ್ಯಾಪಕ ಮೂಲಸೌಕರ್ಯ ಯೋಜನೆಗಳನ್ನು ಹಮ್ಮಿಕೊಂಡರೂ ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ. ಈ ಅಭಿವೃದ್ಧಿ ಕಾರ್ಯಗಳನ್ನು ಎನ್​ಡಿಎ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಮಾತ್ರ ಅಲ್ಲ, ಸರ್ವಜನರಿಗೂ ಲಾಭವಾಗುವಂತೆ ಮಾಡಲಾಗುತ್ತದೆ. ಎನ್​ಡಿಎ ಸರ್ಕಾರ ಸಮಾಜದ ಪ್ರತಿಯೊಂದು ಕ್ಷೇತ್ರಕ್ಕೂ ಕೆಲಸ ಮಾಡುತ್ತದೆ. ಆದರೆ ಮುಸ್ಲಿಮರು ಮಾತ್ರ ಬಿಜೆಪಿಗೆ ಮತ ಹಾಕುವುದಿಲ್ಲ’ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಹೋಗಿ ವಾಪಸಾದ ಅರ್ಜಿತ್ ಚೌಬೆ

ಬಿಹಾರ ರಾಜ್ಯದಲ್ಲಿ ಈ ವರ್ಷ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ನವೆಂಬರ್ 6 ಮತ್ತು 11ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. 243 ಸದಸ್ಯಬಲದ ಬಿಹಾರ ವಿಧಾನಸಭೆಯ ಅಧಿಕಾರ ಗದ್ದುಗೆ ಹಿಡಿಯಲು 122 ಸ್ಥಾನಗಳ ಅಗತ್ಯ ಇದೆ. ಸದ್ಯ ಅಲ್ಲಿ ಜೆಡಿಯು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಇದೆ. ಆರ್​ಜೆಡಿ, ಕಾಂಗ್ರೆಸ್ ಮೊದಲಾದ ಪಕ್ಷಗಳು ಒಟ್ಟುಗೂಡಿ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?