AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurugram: ಸ್ಮಶಾನದ ಗೋಡೆ ಕುಸಿದು 4 ಮಂದಿ ಸಾವು, ಇಬ್ಬರಿಗೆ ಗಾಯ

ಸ್ಮಶಾನದ ಗೋಡೆ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು.

Gurugram: ಸ್ಮಶಾನದ ಗೋಡೆ ಕುಸಿದು 4 ಮಂದಿ ಸಾವು, ಇಬ್ಬರಿಗೆ ಗಾಯ
ನಯನಾ ರಾಜೀವ್
|

Updated on: Apr 21, 2024 | 9:48 AM

Share

ಗುರುಗ್ರಾಮದ ಸೈಬರ್ ಸಿಟಿಯ ಮದನ್‌ಪುರಿಯಲ್ಲಿರುವ ಸ್ಮಶಾನದ ಗೇಟ್‌ನ ಹಿಂದಿನ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು.

ಪೊಲೀಸರ ಪ್ರಕಾರ, ಅರ್ಜುನ್ ನಗರ ರಸ್ತೆ ಸಂಖ್ಯೆ 8 ರಲ್ಲಿ ಸಂಜೆ 5.30 ರಿಂದ 6 ರ ನಡುವೆ ಈ ಘಟನೆ ನಡೆದಿದೆ. ಇಲ್ಲಿ ಸ್ಮಶಾನದ 18 ಅಡಿ ಎತ್ತರದ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ. ಗೋಡೆಯ ಪಕ್ಕದಲ್ಲಿ ಕುಳಿತಿದ್ದ ಜನರು ಅವಶೇಷಗಳ ಅಡಿಯಲ್ಲಿ ಹೂತುಹೋದರು. ಅಕ್ಕಪಕ್ಕದ ಜನರು ಅವಶೇಷಗಳನ್ನು ತೆಗೆಯುವ ಪ್ರಯತ್ನ ನಡೆಸಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಜನರನ್ನು ಕೂಡಲೇ ರಕ್ಷಿಸಿ ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ದೇವಿ ದಯಾಳ್ (72), ಕೃಷ್ಣ ಕುಮಾರ್ (52), ಮನೋಜ್ (35) ಮತ್ತು ಬಾಲಕಿ ಖುಷ್ಬೂ (10) ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ಕಪಕ್ಕದ ಜನರ ಪ್ರಕಾರ, ಇಲ್ಲಿ ಗೋಡೆಯ ಉದ್ದಕ್ಕೂ ಗಿಡಗಳನ್ನು ನೆಡಲಾಗಿತ್ತು.

ಮತ್ತಷ್ಟು ಓದಿ: ರಾಜಸ್ಥಾನ: ಮದುವೆ ಮುಗಿಸಿ ಬರುವಾಗ ಕಾರು, ಟ್ರಕ್ ಮಧ್ಯೆ ಭೀಕರ ಅಪಘಾತ, 9 ಮಂದಿ ಸಾವು

ಇದರಿಂದಾಗಿ ಗೋಡೆ ಬಾಗಿತ್ತು. ರಸ್ತೆಯ ಗೋಡೆಯ ಪಕ್ಕದಲ್ಲಿ ಕೆಲವರು ಕುಳಿತಿದ್ದರು. ಮಕ್ಕಳು ಆಟವಾಡುತ್ತಿದ್ದ ವೇಳೆ ಏಕಾಏಕಿ ಗೋಡೆ ಕುಸಿದಿದೆ. ಅಲ್ಲಿ ನಿಲ್ಲಿಸಿದ್ದ ಕೆಲವು ಬೈಕ್‌ಗಳು ಸಹ ಅವಶೇಷಗಳಡಿ ಹೂತು ಹೋಗಿವೆ. ಈ ದುರಂತಕ್ಕೆ ಕಾರಣ ತಿಳಿಯಲು ಸೂಕ್ತ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗತ್ಯವಿರುವ ಕಾನೂನಾತ್ಮಕ ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?