AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ಮಂದಿ ಶಸ್ತ್ರಧಾರಿಗಳಿಂದ ತಂದೆಯನ್ನು ರಕ್ಷಿಸಿದ ಸಾಹಸಿ ಬಾಲಕಿ

ಎಂಟು ಮಂದಿ ಶಸ್ತ್ರಧಾರಿಗಳಿಂದ ತಂದೆಯನ್ನು ಕಾಪಾಡಿ ಬಾಲಕಿಯೊಬ್ಬಳು ಇದೀಗ ಫೇಮಸ್ ಆಗಿದ್ದಾಳೆ. ಕೈಯಲ್ಲಿ ಬಂದೂಕು, ಕತ್ತಿ, ಕೊಡಲಿಗಳನ್ನು ಹಿಡಿದಿದ್ದ ಗುಂಪಿನಿಂದ ತಂದೆಯನ್ನು ರಕ್ಷಿಸಿಕೊಳ್ಳುವಲ್ಲಿ ಆಕೆ ಯಶಸ್ವಿಯಾಗಿದ್ದಾಳೆ.

ಎಂಟು ಮಂದಿ ಶಸ್ತ್ರಧಾರಿಗಳಿಂದ ತಂದೆಯನ್ನು ರಕ್ಷಿಸಿದ ಸಾಹಸಿ ಬಾಲಕಿ
ನಯನಾ ರಾಜೀವ್
|

Updated on: Aug 07, 2024 | 2:30 PM

Share

ಸುತ್ತುವರೆದಿದ್ದ ಶಸ್ತ್ರಧಾರಿಗಳಿಂದ ಬಾಲಕಿಯೊಬ್ಬಳು ತಂದೆಯನ್ನು ಕಾಪಾಡಿ ಸಾಹಸ ಮೆರೆದಿದ್ದಾಳೆ. ಛತ್ತೀಸ್​ಗಢದ ಬಸ್ತಾರ್ ಜಿಲ್ಲೆಯ ನಾರಾಯಣಪುರದ ಹಳ್ಳಿಯೊಂದರಲ್ಲಿ ಎಂಟು ಶಸ್ತ್ರಧಾರಿಗಳ ಗುಂಪು ವ್ಯಕ್ತಿಯೊಬ್ಬರನ್ನು ಸುತ್ತುವರೆದಿತ್ತು. ಗುಂಪೊಂದು ಸೋಮಧರ್ ಎಂಬುವವರ ಹುಡುಕಾಟ ನಡೆಸಿತ್ತು, ಮನೆಗೆ ನುಗ್ಗಿ ಕೊಡಲಿಯಿಂದ ಹಲ್ಲೆ ನಡೆಸಿದ್ದರು. ತಂದೆಗೆ ಊಟ ಬಡಿಸಲು ಹೊರಟಿದ್ದ ಬಾಲಕಿ ತಂದೆಯ ಎದುರು ನಿಂತಿದ್ದ ಗುಂಪು ನೋಡಿ ಬೆಚ್ಚಿಬಿದ್ದಿದ್ದಾಳೆ.

ನಾನು ಕಿಟಕಿಯಿಂದ ನೋಡಿದಾಗ ಮುಸುಕುಧಾರಿಗಳು ಕೊಡಲಿ ಹಿಡಿದುಕೊಂಡು ಹೋಗುತ್ತಿರುವುದು ಕಂಡಿದ್ದಳು ಅವರಲ್ಲಿ ಒಬ್ಬರ ಬಳಿ ಬಂದೂಕಿತ್ತು. ಕೊಡಲಿ ಹಿಡಿದ ದಾಳಿಕೋರನ ಕಡೆಗೆ ನುಗ್ಗಿ ಆಯುಧವನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು. ಆದರೆ ವ್ಯಕ್ತಿಯ ಮೇಲಿನ ದಾಳಿ ವಿಳಂಬವಾಯಿತು.

ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಬಂದು ಗ್ಯಾಂಗ್​ನ ಹಿಡಿಯಲು ಪ್ರಯತ್ನಿಸಿದಾಗ ಅವರು ಓಡಿ ಹೋಗಿದ್ದಾರೆ. ಬಾಲಕಿಯ ತಂದೆಯ ಎದೆಗೆ ಗಾಯವಾಗಿದೆ, ಅವರ ಸ್ಥಿತಿ ಸ್ಥಿರವಾಗಿದೆ.

ಮತ್ತಷ್ಟು ಓದಿ: ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರಿಗೇ ಬ್ಲಾಕ್ ಮೇಲ್ ಮಾಡ್ತಿದ್ದ ಖತರ್ನಾಕ್ ಆಸಾಮಿ ಅಂದರ್​​

ನಾನು ಅವರ ಕಡೆ ಓಡಲಾರಂಭಿಸಿದೆ, ಒಬ್ಬ ವ್ಯಕ್ತಿ ತನ್ನ ಕೊಡಲಿಯನ್ನು ಎತ್ತಿ ತಂದೆಯ ಎದೆಯ ಮೇಲೆ ಇಳಿಸುತ್ತಿರುವುದನ್ನು ನೋಡಿದ್ದೆ. ನಾನು ಕೇವಲ ಒಂದು ಸೆಕೆಂಡ್ ತಡಮಾಡಿದ್ದರೂ ತಂದೆ ಬದುಕುತ್ತಿರಲಿಲ್ಲ. ನಾನು ಗಲಿಬಿಲಿಯಲ್ಲಿ ಅವರ ಮೇಲೆ ಹಾರಿ ಕೊಡಲಿಯನ್ನು ದೂರ ಎಸೆದೆ ಎಂದು ಬಾಲಕಿ ಹೇಳಿದ್ದಾಳೆ.

ಕೊಲೆ ಯತ್ನದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನಾರಾಯಣಪುರ ಪ್ರಭಾತ್ ಸಿಂಗ್ ಹೇಳಿದ್ದಾರೆ. ಕುಟುಂಬದವರು ಮಾವೋವಾದಿಗಳ ಕೈವಾಡವನ್ನು ಶಂಕಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?