AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ
ಚಿರತೆ(ಸಾಂದರ್ಭಿಕ ಚಿತ್ರ)Image Credit source: Adopt an Animal Kits
ನಯನಾ ರಾಜೀವ್
|

Updated on: Oct 13, 2024 | 10:47 AM

Share

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಆಕೆ ಪೋಷಕರೊಂದಿಗೆ ಹೊಲದಲ್ಲಿ ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ದಾಳಿ ನಡೆಸಿದ ಚಿರತೆ ಸಮೀಪದ ಪ್ರದೇಶದಿಂದ ಹೊರಬಂದು ತಾನ್ಯಾಳ ಕುತ್ತಿಗೆಯನ್ನು ಹಿಡಿದುಕೊಂಡು ಪರಾರಿಯಾಗಿದೆ. ಕೂಡಲೇ ಮನೆಯವರು ಚಿರತೆಯನ್ನು ಅಟ್ಟಿಸಿಕೊಂಡು ಹೋಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅವರು ಹತ್ತಿರದ ಕಬ್ಬಿನ ಗದ್ದೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವು ಕೂಡ ಓಡಿಬಂದಿದ್ದರು.

ಚಿರತೆಯ ಗಮನವನ್ನು ಬೇರೆಡೆಗೆ ಸೆಳೆದು ತಾನ್ಯಾಳನ್ನು ಹೇಗೋ ಎಳೆದುಕೊಂಡಿದ್ದಾರೆ. ಕೂಡಲೇ ಆಕೆಯನ್ನು ಸಮುದಾಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಆಕೆ ಗ್ರಾಮದ ಕೌನ್ಸಿಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, 21 ತಿಂಗಳಲ್ಲಿ ಚಿರತೆ 26 ಬಾರಿ ದಾಳಿ ನಡೆದಿದೆ. ಈ ವರ್ಷ 7 ಮಂದಿ ಗದ್ದೆಯಲ್ಲಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉತ್ತರಾಖಂಡ: ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಎಳೆದೊಯ್ದ ಚಿರತೆ

ಚಿರತೆ ಸೆರೆ ಹಿಡಿಯಲು ಗದ್ದೆಯಲ್ಲಿ ಬೋನು ಹಾಕಿದ್ದರೂ ಇನ್ನೂ ಯಶಸ್ವಿಯಾಗಿಲ್ಲ. ಸ್ಥಳೀಯ ಶಾಸಕ ಓಂ ಕುಮಾರ್ ಸಿಎಚ್‌ಸಿಗೆ ಭೇಟಿ ನೀಡಿ ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವರ್ಷ ಚಿರತೆ ದಾಳಿಯಿಂದ ಹಲವಾರು ದುರಂತ ಸಾವುಗಳು ಸಂಭವಿಸಿವೆ. ಜನವರಿ 20 ರಂದು ಜಲಾಲ್‌ಪುರ ಹಸ್ನಾ ಗ್ರಾಮದಲ್ಲಿ ಚಂದ್ರಪ್ರಕಾಶ್ ಸಿಂಗ್ ಅವರನ್ನು ಹತ್ಯೆ ಮಾಡಿತ್ತು. ನಂತರ ಜುಲೈ 13 ರಂದು ಮಂಡೋರಿ ಗ್ರಾಮದಲ್ಲಿ ದಿವ್ಯಾಂಶಿ ಪ್ರಾಣ ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ