Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ
ಚಿರತೆ(ಸಾಂದರ್ಭಿಕ ಚಿತ್ರ)Image Credit source: Adopt an Animal Kits
Follow us
ನಯನಾ ರಾಜೀವ್
|

Updated on: Oct 13, 2024 | 10:47 AM

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಆಕೆ ಪೋಷಕರೊಂದಿಗೆ ಹೊಲದಲ್ಲಿ ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ದಾಳಿ ನಡೆಸಿದ ಚಿರತೆ ಸಮೀಪದ ಪ್ರದೇಶದಿಂದ ಹೊರಬಂದು ತಾನ್ಯಾಳ ಕುತ್ತಿಗೆಯನ್ನು ಹಿಡಿದುಕೊಂಡು ಪರಾರಿಯಾಗಿದೆ. ಕೂಡಲೇ ಮನೆಯವರು ಚಿರತೆಯನ್ನು ಅಟ್ಟಿಸಿಕೊಂಡು ಹೋಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅವರು ಹತ್ತಿರದ ಕಬ್ಬಿನ ಗದ್ದೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವು ಕೂಡ ಓಡಿಬಂದಿದ್ದರು.

ಚಿರತೆಯ ಗಮನವನ್ನು ಬೇರೆಡೆಗೆ ಸೆಳೆದು ತಾನ್ಯಾಳನ್ನು ಹೇಗೋ ಎಳೆದುಕೊಂಡಿದ್ದಾರೆ. ಕೂಡಲೇ ಆಕೆಯನ್ನು ಸಮುದಾಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಆಕೆ ಗ್ರಾಮದ ಕೌನ್ಸಿಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, 21 ತಿಂಗಳಲ್ಲಿ ಚಿರತೆ 26 ಬಾರಿ ದಾಳಿ ನಡೆದಿದೆ. ಈ ವರ್ಷ 7 ಮಂದಿ ಗದ್ದೆಯಲ್ಲಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉತ್ತರಾಖಂಡ: ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಎಳೆದೊಯ್ದ ಚಿರತೆ

ಚಿರತೆ ಸೆರೆ ಹಿಡಿಯಲು ಗದ್ದೆಯಲ್ಲಿ ಬೋನು ಹಾಕಿದ್ದರೂ ಇನ್ನೂ ಯಶಸ್ವಿಯಾಗಿಲ್ಲ. ಸ್ಥಳೀಯ ಶಾಸಕ ಓಂ ಕುಮಾರ್ ಸಿಎಚ್‌ಸಿಗೆ ಭೇಟಿ ನೀಡಿ ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವರ್ಷ ಚಿರತೆ ದಾಳಿಯಿಂದ ಹಲವಾರು ದುರಂತ ಸಾವುಗಳು ಸಂಭವಿಸಿವೆ. ಜನವರಿ 20 ರಂದು ಜಲಾಲ್‌ಪುರ ಹಸ್ನಾ ಗ್ರಾಮದಲ್ಲಿ ಚಂದ್ರಪ್ರಕಾಶ್ ಸಿಂಗ್ ಅವರನ್ನು ಹತ್ಯೆ ಮಾಡಿತ್ತು. ನಂತರ ಜುಲೈ 13 ರಂದು ಮಂಡೋರಿ ಗ್ರಾಮದಲ್ಲಿ ದಿವ್ಯಾಂಶಿ ಪ್ರಾಣ ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ