AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು. ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು. […]

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 12, 2020 | 5:20 PM

Share

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು.

ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು.

ಇಷ್ಟಕ್ಕೆ ನಿಲ್ಲಿಸದೆ, ಕಿಡಿಗೇಡಿಗಳು ಮನೋಜ್ ಬೈಕಿಗೆ ಗುದಿದ್ದಾರೆ. ಈ ವೇಳೆ ಬೈಕ್​ನ ಸಮತೋಲನ ತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಸುದೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸುದೀಕ್ಷಾ ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಬುಲಂದ್‌ಶಹರ್ ಎಂಬ ಊರಿನವಳು. ತಂದೆ ಜಿತೇಂದ್ರ ಭಾಟಿ ಚಹದ ಅಂಗಡಿ ಇಟ್ಟಿದ್ದು ಅದರಿಂದಲೇ ಕುಟುಂಬದ ನಿರ್ವಹಣೆ ಮಾಡುತ್ತಿದ್ದರು. ಓದಿನಲ್ಲಿ ಸದಾ ಮುಂದಿದ್ದ ಸುದೀಕ್ಷಾ ತನ್ನ ಪ್ರತಿಭೆಯಿಂದಲೇ ಅಮೆರಿಕಾದ ವಿದ್ಯಾರ್ಥಿ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ಲಾಕ್‌ಡೌನ್‌ನಿಂದಾಗಿ ಜೂನ್‌ನಲ್ಲಿ ಸುದೀಕ್ಷಾ ತನ್ನ ಊರಿಗೆ ಮರಳಿದ್ದಳು.

ಸುದೀಕ್ಷಾ HCL ಫೌಂಡೇಶನ್‌ನ ಶಾಲೆಯಲ್ಲಿ ತನ್ನ ಶಾಲಾ ಶಿಕ್ಷಣ ಮುಗಿಸಿದ್ದಳು. ಜೊತೆಗೆ, 2018 ರಲ್ಲಿ ತನ್ನ ಜಿಲ್ಲೆಗೆ ಸಿಬಿಎಸ್‌ಇ ಟಾಪರ್ ಆಗಿದ್ದಳು.ಇದೇ ಆಗಸ್ಟ್ 20 ರಂದು ಅಮೆರಿಕಾಗೆ ಮರಳಲು ತಯಾರಿ ಸಹ ನಡೆಸುತ್ತಿದ್ದಳು. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದ್ದು ಜೀವನದಲ್ಲಿ ಮತ್ತಷ್ಟು ಮಿಂಚಬೇಕಿದ್ದ ಪ್ರತಿಭೆ ಅಸುನೀಗಿದ್ದಾಳೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ