AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು. ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು. […]

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 12, 2020 | 5:20 PM

Share

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು.

ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು.

ಇಷ್ಟಕ್ಕೆ ನಿಲ್ಲಿಸದೆ, ಕಿಡಿಗೇಡಿಗಳು ಮನೋಜ್ ಬೈಕಿಗೆ ಗುದಿದ್ದಾರೆ. ಈ ವೇಳೆ ಬೈಕ್​ನ ಸಮತೋಲನ ತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಸುದೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸುದೀಕ್ಷಾ ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಬುಲಂದ್‌ಶಹರ್ ಎಂಬ ಊರಿನವಳು. ತಂದೆ ಜಿತೇಂದ್ರ ಭಾಟಿ ಚಹದ ಅಂಗಡಿ ಇಟ್ಟಿದ್ದು ಅದರಿಂದಲೇ ಕುಟುಂಬದ ನಿರ್ವಹಣೆ ಮಾಡುತ್ತಿದ್ದರು. ಓದಿನಲ್ಲಿ ಸದಾ ಮುಂದಿದ್ದ ಸುದೀಕ್ಷಾ ತನ್ನ ಪ್ರತಿಭೆಯಿಂದಲೇ ಅಮೆರಿಕಾದ ವಿದ್ಯಾರ್ಥಿ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ಲಾಕ್‌ಡೌನ್‌ನಿಂದಾಗಿ ಜೂನ್‌ನಲ್ಲಿ ಸುದೀಕ್ಷಾ ತನ್ನ ಊರಿಗೆ ಮರಳಿದ್ದಳು.

ಸುದೀಕ್ಷಾ HCL ಫೌಂಡೇಶನ್‌ನ ಶಾಲೆಯಲ್ಲಿ ತನ್ನ ಶಾಲಾ ಶಿಕ್ಷಣ ಮುಗಿಸಿದ್ದಳು. ಜೊತೆಗೆ, 2018 ರಲ್ಲಿ ತನ್ನ ಜಿಲ್ಲೆಗೆ ಸಿಬಿಎಸ್‌ಇ ಟಾಪರ್ ಆಗಿದ್ದಳು.ಇದೇ ಆಗಸ್ಟ್ 20 ರಂದು ಅಮೆರಿಕಾಗೆ ಮರಳಲು ತಯಾರಿ ಸಹ ನಡೆಸುತ್ತಿದ್ದಳು. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದ್ದು ಜೀವನದಲ್ಲಿ ಮತ್ತಷ್ಟು ಮಿಂಚಬೇಕಿದ್ದ ಪ್ರತಿಭೆ ಅಸುನೀಗಿದ್ದಾಳೆ.

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು