AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು. ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು. […]

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Aug 12, 2020 | 5:20 PM

Share

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು.

ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು.

ಇಷ್ಟಕ್ಕೆ ನಿಲ್ಲಿಸದೆ, ಕಿಡಿಗೇಡಿಗಳು ಮನೋಜ್ ಬೈಕಿಗೆ ಗುದಿದ್ದಾರೆ. ಈ ವೇಳೆ ಬೈಕ್​ನ ಸಮತೋಲನ ತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಸುದೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸುದೀಕ್ಷಾ ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಬುಲಂದ್‌ಶಹರ್ ಎಂಬ ಊರಿನವಳು. ತಂದೆ ಜಿತೇಂದ್ರ ಭಾಟಿ ಚಹದ ಅಂಗಡಿ ಇಟ್ಟಿದ್ದು ಅದರಿಂದಲೇ ಕುಟುಂಬದ ನಿರ್ವಹಣೆ ಮಾಡುತ್ತಿದ್ದರು. ಓದಿನಲ್ಲಿ ಸದಾ ಮುಂದಿದ್ದ ಸುದೀಕ್ಷಾ ತನ್ನ ಪ್ರತಿಭೆಯಿಂದಲೇ ಅಮೆರಿಕಾದ ವಿದ್ಯಾರ್ಥಿ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ಲಾಕ್‌ಡೌನ್‌ನಿಂದಾಗಿ ಜೂನ್‌ನಲ್ಲಿ ಸುದೀಕ್ಷಾ ತನ್ನ ಊರಿಗೆ ಮರಳಿದ್ದಳು.

ಸುದೀಕ್ಷಾ HCL ಫೌಂಡೇಶನ್‌ನ ಶಾಲೆಯಲ್ಲಿ ತನ್ನ ಶಾಲಾ ಶಿಕ್ಷಣ ಮುಗಿಸಿದ್ದಳು. ಜೊತೆಗೆ, 2018 ರಲ್ಲಿ ತನ್ನ ಜಿಲ್ಲೆಗೆ ಸಿಬಿಎಸ್‌ಇ ಟಾಪರ್ ಆಗಿದ್ದಳು.ಇದೇ ಆಗಸ್ಟ್ 20 ರಂದು ಅಮೆರಿಕಾಗೆ ಮರಳಲು ತಯಾರಿ ಸಹ ನಡೆಸುತ್ತಿದ್ದಳು. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದ್ದು ಜೀವನದಲ್ಲಿ ಮತ್ತಷ್ಟು ಮಿಂಚಬೇಕಿದ್ದ ಪ್ರತಿಭೆ ಅಸುನೀಗಿದ್ದಾಳೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!