AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು. ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು. […]

ಈವ್​ ಟೀಸಿಂಗ್​: ಪುಂಡರ ಹುಚ್ಚಾಟಕ್ಕೆ ಪ್ರತಿಭಾನ್ವಿತ ಯುವತಿ ಬಲಿ, ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 12, 2020 | 5:20 PM

Share

ದೆಹಲಿ: ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಬೈಕ್​ನಿಂದ ಬಿದ್ದು ಮೃತಪಟ್ಟಿರುವ ಘಟನೆ ಕಳೆದ ಸೋಮವಾರ ಸಂಭವಿಸಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡಲು ಈಕೆಗೆ 3.83 ಕೋಟಿ ರೂಪಾಯಿ ವಿದ್ಯಾರ್ಥಿವೇತನ ಬರುತ್ತಿತ್ತು.

ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಸುದೀಕ್ಷಾ ಎಂಬ ಯುವತಿ ತನ್ನ ಚಿಕ್ಕಪ್ಪ ಮನೋಜ್ ಭಾಟಿಯೊಂದಿಗೆ ಸಿಕಂದ್ರಬಾದ್‌ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಅವರನ್ನು ಕೆಲ ದುಷ್ಕರ್ಮಿಗಳು ಬೆನ್ನಟ್ಟಿ ಕಿಚಾಯಿಸಲು ಪ್ರಾರಂಭಿಸಿದ್ದರು.  ನಂತರ ಸುದೀಕ್ಷಾ ಮತ್ತು ಮನೋಜ್​ರ ಬೈಕ್ ಮುಂದೆ ಸ್ಟಂಟ್ ಮಾಡಲು ಮುಂದಾದರು.

ಇಷ್ಟಕ್ಕೆ ನಿಲ್ಲಿಸದೆ, ಕಿಡಿಗೇಡಿಗಳು ಮನೋಜ್ ಬೈಕಿಗೆ ಗುದಿದ್ದಾರೆ. ಈ ವೇಳೆ ಬೈಕ್​ನ ಸಮತೋಲನ ತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಸುದೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸುದೀಕ್ಷಾ ಉತ್ತರ ಪ್ರದೇಶದ ದಾದ್ರಿಯಲ್ಲಿರುವ ಬುಲಂದ್‌ಶಹರ್ ಎಂಬ ಊರಿನವಳು. ತಂದೆ ಜಿತೇಂದ್ರ ಭಾಟಿ ಚಹದ ಅಂಗಡಿ ಇಟ್ಟಿದ್ದು ಅದರಿಂದಲೇ ಕುಟುಂಬದ ನಿರ್ವಹಣೆ ಮಾಡುತ್ತಿದ್ದರು. ಓದಿನಲ್ಲಿ ಸದಾ ಮುಂದಿದ್ದ ಸುದೀಕ್ಷಾ ತನ್ನ ಪ್ರತಿಭೆಯಿಂದಲೇ ಅಮೆರಿಕಾದ ವಿದ್ಯಾರ್ಥಿ ವೇತನ ಪಡೆದು ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ಲಾಕ್‌ಡೌನ್‌ನಿಂದಾಗಿ ಜೂನ್‌ನಲ್ಲಿ ಸುದೀಕ್ಷಾ ತನ್ನ ಊರಿಗೆ ಮರಳಿದ್ದಳು.

ಸುದೀಕ್ಷಾ HCL ಫೌಂಡೇಶನ್‌ನ ಶಾಲೆಯಲ್ಲಿ ತನ್ನ ಶಾಲಾ ಶಿಕ್ಷಣ ಮುಗಿಸಿದ್ದಳು. ಜೊತೆಗೆ, 2018 ರಲ್ಲಿ ತನ್ನ ಜಿಲ್ಲೆಗೆ ಸಿಬಿಎಸ್‌ಇ ಟಾಪರ್ ಆಗಿದ್ದಳು.ಇದೇ ಆಗಸ್ಟ್ 20 ರಂದು ಅಮೆರಿಕಾಗೆ ಮರಳಲು ತಯಾರಿ ಸಹ ನಡೆಸುತ್ತಿದ್ದಳು. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದ್ದು ಜೀವನದಲ್ಲಿ ಮತ್ತಷ್ಟು ಮಿಂಚಬೇಕಿದ್ದ ಪ್ರತಿಭೆ ಅಸುನೀಗಿದ್ದಾಳೆ.

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?