AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕ್ಯೂರಿಟಿ ಮೇಲೆ ಕಾರು​ ಹರಿಸಿ ಸಾಯಿಸಿದ್ದು.. ಆ ಯುವತಿಯ ಗಮನಕ್ಕೆ ಬರಲೇ ಇಲ್ವಂತೆ!

ಚೆನ್ನೈ:ಅಪಾರ್ಟ್ಮೆಂಟಿನ ಪಾರ್ಕಿಂಗ್ ಜಾಗದಲ್ಲಿ ನಿದ್ರೆಗೆ ಜಾರಿದ್ದ ಸೆಕ್ಯೂರಿಟಿ ಗಾರ್ಡ್ ಮೇಲೆ ಆಡಿ ಕಾರ್ ಹರಿದ ಪರಿಣಾಮದಿಂದಾಗಿ ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಸೆಪ್ಟೆಂಬರ್ 2 ರಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈನ ಸ್ಯಾಂಟೋಮ್‌ನ ಫೋರ್‌ಶೋರ್ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದ್ದು, ಮಂದವೆಲ್ಲಿಯ ನಿವಾಸಿಯಾಗಿರುವ ಹಾಗೂ ನಿವೃತ್ತ ಸರ್ಕಾರಿ ನೌಕರರಾದ ಡಿ.ಶಿವಪ್ರಕಾಸಂ (68) ಮೃತ ದುರ್ದೈವಿಯಾಗಿದ್ದಾರೆ. ಕೇವಲ ಒಂದು ವಾರದ ಮೊದಲು ಸೆಕ್ಯುರಿಟಿ ಕೆಲಸಕ್ಕೆ ಸೇರಿದ್ದ ಶಿವಪ್ರಕಾಸಂ ಘಟನೆಯ ಸಮಯದಲ್ಲಿ ನಿದ್ದೆ ಮಾಡುತ್ತಿರುವುದು […]

ಸೆಕ್ಯೂರಿಟಿ ಮೇಲೆ ಕಾರು​  ಹರಿಸಿ ಸಾಯಿಸಿದ್ದು.. ಆ ಯುವತಿಯ ಗಮನಕ್ಕೆ ಬರಲೇ ಇಲ್ವಂತೆ!
ಸಾಧು ಶ್ರೀನಾಥ್​
|

Updated on:Sep 04, 2020 | 4:06 PM

Share

ಚೆನ್ನೈ:ಅಪಾರ್ಟ್ಮೆಂಟಿನ ಪಾರ್ಕಿಂಗ್ ಜಾಗದಲ್ಲಿ ನಿದ್ರೆಗೆ ಜಾರಿದ್ದ ಸೆಕ್ಯೂರಿಟಿ ಗಾರ್ಡ್ ಮೇಲೆ ಆಡಿ ಕಾರ್ ಹರಿದ ಪರಿಣಾಮದಿಂದಾಗಿ ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಸೆಪ್ಟೆಂಬರ್ 2 ರಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈನ ಸ್ಯಾಂಟೋಮ್‌ನ ಫೋರ್‌ಶೋರ್ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದ್ದು, ಮಂದವೆಲ್ಲಿಯ ನಿವಾಸಿಯಾಗಿರುವ ಹಾಗೂ ನಿವೃತ್ತ ಸರ್ಕಾರಿ ನೌಕರರಾದ ಡಿ.ಶಿವಪ್ರಕಾಸಂ (68) ಮೃತ ದುರ್ದೈವಿಯಾಗಿದ್ದಾರೆ. ಕೇವಲ ಒಂದು ವಾರದ ಮೊದಲು ಸೆಕ್ಯುರಿಟಿ ಕೆಲಸಕ್ಕೆ ಸೇರಿದ್ದ ಶಿವಪ್ರಕಾಸಂ ಘಟನೆಯ ಸಮಯದಲ್ಲಿ ನಿದ್ದೆ ಮಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವರದಿಗಳ ಪ್ರಕಾರ, ರಿಯಲ್ ಎಸ್ಟೇಟ್ ಏಜೆಂಟ್​ ಒಬ್ಬರ ಮಗಳಾದ 18 ವರ್ಷದ ಅಪರ್ಣಾ ಎಂಬ ಯುವತಿ ತನ್ನ ಆಡಿ ಕಾರ್​ನಲ್ಲಿ ಹೊರಗಿನಿಂದ ಬಂದು ಅಪಾರ್ಟ್‌ಮೆಂಟಿನ ಪಾರ್ಕಿಂಗ್ ಜಾಗದಲ್ಲಿ ಕಾರ್​ ಪಾರ್ಕ್​ ಮಾಡಿ ತನ್ನ ನಿವಾಸಕ್ಕೆ ತೆರಳಿದ್ದಾಳೆ. ಆದರೆ ಯುವತಿ ಪಾರ್ಕ್​ ಮಾಡಿದ ಕಾರಿನ ಕೆಳಗೆ ವ್ಯಕ್ತಿ ಸಿಲುಕಿಕೊಂಡಿರುವುದು ಯುವತಿಯ ಅರಿವಿಗೆ ಬಂದಿಲ್ಲ.

ಮುಂಜಾನೆ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ನಿವಾಸಿಗಳಿಂದ ಮಾಹಿತಿ ಪಡೆದ ಫೋರ್‌ಶೋರ್ ಎಸ್ಟೇಟ್ ಪೊಲೀಸ್ ಠಾಣೆಯ ಪೊಲೀಸರು ಅಪಾರ್ಟ್‌ಮೆಂಟ್‌ಗೆ ಬಂದಿದ್ದಾರೆ. ನಂತರ ಅಪಾರ್ಟ್‌ಮೆಂಟ್‌ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದ ಪೊಲೀಸರಿಗೆ ಸತ್ಯದ ಅರಿವಾಗಿದೆ.

ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಯುವತಿಯ ಮೇಲೆ FIR ದಾಖಲಾಗಿದ್ದು, ಆಕೆಯನ್ನು ತಕ್ಷಣ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಯುವತಿ DL ಹೊಂದಿದ್ದು, ಘಟನೆಯ ವೇಳೆ ಯುವತಿಗೆ ಯಾವುದೇ ಕೂಗು ಕೇಳಿಲ್ಲ ಮತ್ತು ಆ ಸಮಯದಲ್ಲಿ ಆತ ಬೆಡ್ ಶೀಟ್ ಹೊದ್ದುಕೊಂಡು ಮಲಗಿದ್ದರಿಂದ ಶಿವಪ್ರಕಾಸಂ ಮೇಲೆ ಕಾರ್​ ಹರಿದಿರುವುದನ್ನು ಯುವತಿ ಗಮನಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Published On - 4:02 pm, Fri, 4 September 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?