Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ. ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು. ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ […]

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 25, 2020 | 11:31 AM

ಹೈದರಾಬಾದ್: ದೇಶಾದ್ಯಾಂತ ಸಂಚಲನ ಮೂಡಿಸಿದ್ದ ಪ್ರಣಯ್ ಮರ್ಯಾದಾ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್​ನಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ.

ಪ್ರೀತಿಸಿ ವಿವಾಹವಾಗಿದ್ದ ಹೇಮಂತ್ ಹಾಗೂ ಆವಂತಿಯನ್ನು ಹೈದರಾಬಾದ್ ಗಚ್ಚಿಬೌಲಿಯಿಂದ ಇಬ್ಬರನ್ನೂ ಕಿಡ್ನ್ಯಾಪ್ ಮಾಡಿದ ನಂತರ, ಪತಿ‌ ಹೇಮಂತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹೇಮಂತ್ ಹಾಗೂ ಆವಂತಿ ಇಬ್ಬರೂ ಪ್ರೀತಿಸಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬದಲ್ಲಿ ವಿರೋಧವಿತ್ತು. ಹೀಗಾಗಿ ಕುಟುಂಬದ ವಿರೋಧದ ನಡುವೆಯೇ ಇವರಿಬ್ಬರು ಮದುವೆಯಾಗಿ ಜೀವನ ಸಾಗಿಸುತ್ತಿದ್ದರು.

ಯುವತಿ‌ ಸಂಬಂಧಿಕರು ಕಾರ್​ನಲ್ಲಿ ನವಜೋಡಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಈ ವೇಳೆ ಯುವತಿ ಆವಂತಿ ಕಾರಿನಿಂದ‌ ಜಿಗಿದು ಪರಾರಿಯಾಗಿದ್ದಾಳೆ. ಆದರೆ ಪತಿ ಹೇಮಂತ್​ನನ್ನು ಉಳಿಸಲಾಗಿಲ್ಲ. ನಂತರ ನಿರ್ಜನ ಪ್ರದೇಶಕ್ಕೆ‌ ಹೇಮಂತ್​ನನ್ನು ಕರೆದೊಯ್ದು ಸುಪಾರಿ‌ ಕಿಲ್ಲರ್​ಗಳ ಮೂಲಕ ಯುವತಿ‌ ಕುಟುಂಬ ಹತ್ಯೆ ಮಾಡಿಸಿದೆ.

ಯುವತಿ ಸೋದರಮಾವ ಯುಗೆಂದರರೆಡ್ಡಿ, ಕೆಲ ಸುಪಾರಿ‌ ಕಿಲ್ಲರ್​ಗಳು ಸೇರಿ‌ ಹೇಮಂತ ಹತ್ಯೆ ಮಾಡಿದ್ದಾರೆ. ಸಂಗಾರೆಡ್ಡಿಯ ಕಿಷ್ಟನ್ ಗೂಡಾದ ನಿರ್ಜನ ಪ್ರದೇಶದಲ್ಲಿ ಹತ್ಯೆಗೀಡಾದ ಹೇಮಂತ್ ಶವ ಪತ್ತೆಯಾಗಿದೆ. ಗಚ್ಚಿಬೌಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ