AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ

ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 25, 2022 | 2:32 PM

Share

ಲಖನೌ: ತೀವ್ರ ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ಆಕೆಯ ಸುತ್ತಲೂ ನಿಂತಿದ್ದ ಗಂಡಸರು ವಿಡಿಯೊ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲಗಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕನೌಜ್​ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನೂರಾರು ಮಂದಿ ಈ ಹೃದಯ ವಿದ್ರಾವಕ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 24 ಸೆಕೆಂಡುಗಳ ಕ್ಲಿಪ್​ನಲ್ಲಿ ಯುವತಿಯು ನೆಲದ ಮೇಲೆ ಮಲಗಿ ದುರ್ಬಲವಾಗಿರು ತನ್ನ ಕೈಗಳನ್ನು ಅಸಹಾಯಕವಾಗಿ ಮೇಲೆತ್ತಿ ಸಹಾಯಕ್ಕಾಗಿ ಯಾಚಿಸುತ್ತಿದ್ದಾಳೆ. ಆದರೆ ಸ್ಥಳದಲ್ಲಿದ್ದ ಯಾರೊಬ್ಬರೂ ಆಕೆಯ ನೆರವಿಗೆ ಮುಂದೆ ಬಂದಿಲ್ಲ.

ಕೆಲವರು ಮಾತ್ರ ತುರ್ತಾಗಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರವಷ್ಟೇ ಬಾಲಕಿಗೆ ವೈದ್ಯಕೀಯ ನೆರವು ಸಿಕ್ಕಿದೆ. ಪೊಲೀಸ್ ಹೊರಠಾಣೆಯ ಉಸ್ತುವಾರಿ ಸಿಬ್ಬಂದಿ ಮನೋಜ್ ಪಾಂಡೆ ಬಾಲಕಿಯನ್ನು ಆಟೊ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಕರೆದೊಯ್ಯಲಾಯಿತು.

ವೈರಲ್ ಆಗಿರುವ ವಿಡಿಯೊ ಹೀಗಿದೆ. ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ. ಸಿಸಿಟಿವಿ ಫೂಟೇಜ್​ಗಳನ್ನು ಪರಿಶೀಲಿಸಿರುವ ಪೊಲೀಸರು ಆಕೆಯು ಗೆಳೆಯನೊಬ್ಬನ ಜೊತೆಗೆ ಗೆಸ್ಟ್​ಹೌಸ್​ಗೆ ಹೋಗುವುದನ್ನು ಪತ್ತೆ ಮಾಡಿದ್ದಾರೆ.

Published On - 2:06 pm, Tue, 25 October 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ