AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ

ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
TV9 Web
| Edited By: |

Updated on:Oct 25, 2022 | 2:32 PM

Share

ಲಖನೌ: ತೀವ್ರ ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ಆಕೆಯ ಸುತ್ತಲೂ ನಿಂತಿದ್ದ ಗಂಡಸರು ವಿಡಿಯೊ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲಗಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕನೌಜ್​ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನೂರಾರು ಮಂದಿ ಈ ಹೃದಯ ವಿದ್ರಾವಕ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 24 ಸೆಕೆಂಡುಗಳ ಕ್ಲಿಪ್​ನಲ್ಲಿ ಯುವತಿಯು ನೆಲದ ಮೇಲೆ ಮಲಗಿ ದುರ್ಬಲವಾಗಿರು ತನ್ನ ಕೈಗಳನ್ನು ಅಸಹಾಯಕವಾಗಿ ಮೇಲೆತ್ತಿ ಸಹಾಯಕ್ಕಾಗಿ ಯಾಚಿಸುತ್ತಿದ್ದಾಳೆ. ಆದರೆ ಸ್ಥಳದಲ್ಲಿದ್ದ ಯಾರೊಬ್ಬರೂ ಆಕೆಯ ನೆರವಿಗೆ ಮುಂದೆ ಬಂದಿಲ್ಲ.

ಕೆಲವರು ಮಾತ್ರ ತುರ್ತಾಗಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರವಷ್ಟೇ ಬಾಲಕಿಗೆ ವೈದ್ಯಕೀಯ ನೆರವು ಸಿಕ್ಕಿದೆ. ಪೊಲೀಸ್ ಹೊರಠಾಣೆಯ ಉಸ್ತುವಾರಿ ಸಿಬ್ಬಂದಿ ಮನೋಜ್ ಪಾಂಡೆ ಬಾಲಕಿಯನ್ನು ಆಟೊ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಕರೆದೊಯ್ಯಲಾಯಿತು.

ವೈರಲ್ ಆಗಿರುವ ವಿಡಿಯೊ ಹೀಗಿದೆ. ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ. ಸಿಸಿಟಿವಿ ಫೂಟೇಜ್​ಗಳನ್ನು ಪರಿಶೀಲಿಸಿರುವ ಪೊಲೀಸರು ಆಕೆಯು ಗೆಳೆಯನೊಬ್ಬನ ಜೊತೆಗೆ ಗೆಸ್ಟ್​ಹೌಸ್​ಗೆ ಹೋಗುವುದನ್ನು ಪತ್ತೆ ಮಾಡಿದ್ದಾರೆ.

Published On - 2:06 pm, Tue, 25 October 22

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ