AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ

ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ

ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
ಬಾಲಕಿಗೆ ಸಹಾಯ ಮಾಡದೆ ವಿಡಿಯೊ ಮಾಡಿಕೊಳ್ಳುತ್ತಿದ್ದ ಜನ
TV9 Web
| Edited By: |

Updated on:Oct 25, 2022 | 2:32 PM

Share

ಲಖನೌ: ತೀವ್ರ ರಕ್ತಸ್ರಾವದಿಂದ ಬಳಲಿ ನಿಸ್ತೇಜಳಾಗಿದ್ದ ಬಾಲಕಿಗೆ ಸಹಾಯ ಮಾಡದೆ ಆಕೆಯ ಸುತ್ತಲೂ ನಿಂತಿದ್ದ ಗಂಡಸರು ವಿಡಿಯೊ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲಗಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕನೌಜ್​ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ನೂರಾರು ಮಂದಿ ಈ ಹೃದಯ ವಿದ್ರಾವಕ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 24 ಸೆಕೆಂಡುಗಳ ಕ್ಲಿಪ್​ನಲ್ಲಿ ಯುವತಿಯು ನೆಲದ ಮೇಲೆ ಮಲಗಿ ದುರ್ಬಲವಾಗಿರು ತನ್ನ ಕೈಗಳನ್ನು ಅಸಹಾಯಕವಾಗಿ ಮೇಲೆತ್ತಿ ಸಹಾಯಕ್ಕಾಗಿ ಯಾಚಿಸುತ್ತಿದ್ದಾಳೆ. ಆದರೆ ಸ್ಥಳದಲ್ಲಿದ್ದ ಯಾರೊಬ್ಬರೂ ಆಕೆಯ ನೆರವಿಗೆ ಮುಂದೆ ಬಂದಿಲ್ಲ.

ಕೆಲವರು ಮಾತ್ರ ತುರ್ತಾಗಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರವಷ್ಟೇ ಬಾಲಕಿಗೆ ವೈದ್ಯಕೀಯ ನೆರವು ಸಿಕ್ಕಿದೆ. ಪೊಲೀಸ್ ಹೊರಠಾಣೆಯ ಉಸ್ತುವಾರಿ ಸಿಬ್ಬಂದಿ ಮನೋಜ್ ಪಾಂಡೆ ಬಾಲಕಿಯನ್ನು ಆಟೊ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಕರೆದೊಯ್ಯಲಾಯಿತು.

ವೈರಲ್ ಆಗಿರುವ ವಿಡಿಯೊ ಹೀಗಿದೆ. ದುರ್ಬಲ ಬಾಲಕಿಯ ಹೆಸರು ಮತ್ತು ಆಕೆ ಅಂಥ ಅಸಹಾಯಕ ಸ್ಥಿತಿಗೆ ತಲುಪಲು ಏನು ಕಾರಣ ಎಂಬುದೂ ತಿಳಿದು ಬಂದಿಲ್ಲ. ಸಿಸಿಟಿವಿ ಫೂಟೇಜ್​ಗಳನ್ನು ಪರಿಶೀಲಿಸಿರುವ ಪೊಲೀಸರು ಆಕೆಯು ಗೆಳೆಯನೊಬ್ಬನ ಜೊತೆಗೆ ಗೆಸ್ಟ್​ಹೌಸ್​ಗೆ ಹೋಗುವುದನ್ನು ಪತ್ತೆ ಮಾಡಿದ್ದಾರೆ.

Published On - 2:06 pm, Tue, 25 October 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!