AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

ಅಯೋಧ್ಯೆಯಲ್ಲಿ ನವೆಂಬರ್​ 1ರಿಂದ 5ರವರೆಗೆ ದೀಪೋತ್ಸವ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 9 ಲಕ್ಷ ಹಣತೆಗಳು ಬೆಳಗಲಿವೆ ಎಂದು ಯೋಗಿ ಆದಿತ್ಯನಾಥ್​ ಈಗಾಗಲೇ ಘೋಷಣೆ ಮಾಡಿದ್ದಾರೆ.

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ
ಶ್ರೀರಾಮಜನ್ಮಭೂಮಿಗೆ ಕಾಬೂಲ್​ ನದಿ ನೀರು ಸಮರ್ಪಣೆ (ಚಿತ್ರಕೃಪೆ-ಎಎನ್​ಐ)
TV9 Web
| Edited By: |

Updated on: Oct 31, 2021 | 5:48 PM

Share

ಅಫ್ಘಾನಿಸ್ತಾನದಿಂದ ಹುಡುಗಿಯೊಬ್ಬಳು ಕಳಿಸಿದ್ದ ಕಾಬೂಲ್​ ನದಿಯ ನೀರಿನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಶ್ರೀ ರಾಮಜನ್ಮಭೂಮಿಯಲ್ಲಿ ಜಲಾಭಿಷೇಕ ಮತ್ತು ಪೂಜೆ ನೆರವೇರಿಸಿದ್ದಾರೆ. ಇಂಥದ್ದೊಂದು ವಿಶೇಷ ಘಟನೆ ಇಂದು ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಸ್ಥಳದಲ್ಲಿ ನಡೆದಿದೆ. ಬಾಲಕಿ ಕಳಿಸಿದ್ದ ಕಾಬೂಲ್​ ನದಿ ನೀರನ್ನು ಗಂಗಾಜಲದೊಂದಿಗೆ ಮಿಶ್ರಣ ಮಾಡಿ, ಮಂದಿರ ನಿರ್ಮಾಣದ ಜಾಗಕ್ಕೆ ಜಲಾಭಿಷೇಕ ಮಾಡಲಾಗಿದೆ ಎಂದು ಹೇಳಿದ್ದಾರೆ.  

ಅಫ್ಘಾನಿಸ್ತಾನದ ಹುಡುಗಿಯೊಬ್ಬಳು ಕಾಬೂಲ್​ ನದಿಯ ನೀರನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಿಸಿದ್ದಳು. ಅದನ್ನು ಅಯೋಧ್ಯೆ ಶ್ರೀರಾಮ ಜನ್ಮಭೂಮಿಗೆ ಸಮರ್ಪಿಸಬೇಕು ಎಂಬುದು ಆಕೆಯ ಮನವಿಯಾಗಿತ್ತು. ಅದರಂತೆ ನಡೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಹಾಗೇ ಅಯೋಧ್ಯೆಯಲ್ಲಿ ನವೆಂಬರ್​ 1ರಂದು ನಡೆಯಲಿರುವ ಅದ್ದೂರಿ ದೀಪೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಶುರುವಾಗಿದೆ. ಆದರೂ ಈ ಮಧ್ಯೆ ಅಲ್ಲಿನ ಕೆಲವರು ಭಾರತ ಮತ್ತು ಇಲ್ಲಿನ ದೇವಸ್ಥಾನದ ಬಗ್ಗೆ ಪವಿತ್ರ ಭಾವನೆ ಹೊಂದಿದ್ದಾರೆ. ಅವರ ಭಾವನೆಗೆ ಬೆಲೆ ಕೊಡುವುದು ತುಂಬ ಮುಖ್ಯ. ಇಂದು ದೀಪೋತ್ಸವ ಸಿದ್ಧತೆ ಪರಿಶೀಲನೆ ಇದ್ದರೂ ಕೂಡ, ನನ್ನ ಮೊದಲ ಆದ್ಯತೆ, ಬಾಲಕಿ ಕಳಿಸಿದ ಕಾಬೂಲ್​ ನದಿ ನೀರನ್ನು ಶ್ರೀರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಸಮರ್ಪಿಸುವುದೇ ಆಗಿತ್ತು ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ನವೆಂಬರ್​ 1ರಿಂದ 5ರವರೆಗೆ ದೀಪೋತ್ಸವ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 9 ಲಕ್ಷ ಹಣತೆಗಳು ಬೆಳಗಲಿವೆ ಎಂದು ಯೋಗಿ ಆದಿತ್ಯನಾಥ್​ ಈಗಾಗಲೇ ಘೋಷಣೆ ಮಾಡಿದ್ದಾರೆ. ಅಂದರೆ ಕೇಂದ್ರ ಮತ್ತು ರಾಜ್ಯ ವಸತಿ ಯೋಜನೆಗಳ ಅನುಕೂಲವನ್ನು ಸುಮಾರು 9 ಲಕ್ಷ ಫಲಾನುಭವಿಗಳು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ 9 ಲಕ್ಷ ಮಣ್ಣಿನ ದೀಪಗಳು ಬೆಳಗಲಿವೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?