AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮೇಲೆ ಅತ್ಯಾಚಾರ ನಡೆಯುವ 2 ದಿನದ ಮೊದಲು ಅತ್ಯಾಚಾರವೆಂದರೇನು ಎಂದು ಮನೆಯಲ್ಲಿ ಕೇಳಿದ್ದ ಬಾಲಕಿ

ಅತ್ಯಾಚಾರ ನಡೆಯುವ ಸ್ವಲ್ಪ ದಿನದ ಮೊದಲು ಅತ್ಯಾಚಾರವೆಂದರೇನು ಎಂದು ಬಾಲಕಿ ಪ್ರಶ್ನೆ ಮಾಡಿದ್ದಾಗಿ ಆಕೆಯ ಸಂಬಂಧಿ ತಿಳಿಸಿದ್ದಾರೆ. ಅಸ್ಸಾಂನ ನಾಗಾಂವ್​ನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಘಟನೆಯ ಎರಡು ದಿನದ ಮೊದಲು ತನ್ನ ಚಿಕ್ಕಮ್ಮನ ಬಳಿ ಅತ್ಯಾಚಾರವೆಂದರೇನು ಎಂದು ಆಕೆ ಕೇಳಿದ್ದಳಂತೆ.

ತನ್ನ ಮೇಲೆ ಅತ್ಯಾಚಾರ ನಡೆಯುವ 2 ದಿನದ ಮೊದಲು ಅತ್ಯಾಚಾರವೆಂದರೇನು ಎಂದು ಮನೆಯಲ್ಲಿ ಕೇಳಿದ್ದ ಬಾಲಕಿ
ಅಪರಾಧ
ನಯನಾ ರಾಜೀವ್
|

Updated on:Aug 26, 2024 | 9:33 AM

Share

ತನ್ನ ಮೇಲೆ ಅತ್ಯಾಚಾರ ನಡೆಯುವ ಎರಡು ದಿನಕ್ಕೂ ಮೊದಲು ಅತ್ಯಾಚಾರವೆಂದರೇನು ಎಂದು ಬಾಲಕಿ ಮನೆಯಲ್ಲಿ ಕೇಳಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಅಸ್ಸಾಂನ ನಾಗಾಂವ್​ನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಘಟನೆಯ ಎರಡು ದಿನದ ಮೊದಲು ತನ್ನ ಚಿಕ್ಕಮ್ಮನ ಬಳಿ ಅತ್ಯಾಚಾರವೆಂದರೇನು ಎಂದು ಆಕೆ ಕೇಳಿದ್ದಳಂತೆ.

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ತಿಳಿದ ಬಾಲಕಿ ಅತ್ಯಾಚಾರದ ಬಗ್ಗೆ ಪ್ರಶ್ನೆ ಮಾಡಿದ್ದಳು ಎಂದು ಬಾಲಕಿ ಸಂಬಂಧಿ ತಿಳಿಸಿದ್ದಾರೆ. ಈ ಘಟನೆ ಬಳಿಕ ಮನಸ್ಸು ಛಿದ್ರ ಛಿದ್ರವಾಗಿದೆ ಎಂದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆಯುತ್ತದೆ ಎಂದು ಎಂದೂ ಯೋಚಿಸಿರಲಿಲ್ಲ, ಆಕೆಯನ್ನು ರಕ್ಷಣೆ ಮಾಡುವುದರಲ್ಲಿ ನಾನು ಸೋತಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ.

ಆಕೆ ಪೊಲೀಸ್ ಅಧಿಕಾರಿಯಾಗುವ ಕನಸು ಹೊತ್ತಿದ್ದಳು, ಆಗಸ್ಟ್​ 22ರಂದು ಟ್ಯೂಷನ್​ನಿಂದ ಹಿಂದಿರುಗುತ್ತಿದ್ದಾಗ ಬಾಲಕಿಯನ್ನು ಎಳೆದೊಯ್ದು ಮನೆಯಿಂದ 1 ಕಿ.ಮೀ ದೂರದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಮತ್ತಷ್ಟು ಓದಿ: ಅಸ್ಸಾಂನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿ ತನ್ನ ಚಿಕ್ಕಮ್ಮ ಹಾಗೂ ಅಜ್ಜಿಂಯೊಂದಿಗೆ ವಾಸವಾಗಿದ್ದಳು, ಸಾಮಾನ್ಯವಾಗಿ ಚಿಕ್ಕಮ್ಮ ಅಥವಾ ರಿಕ್ಷಾದಲ್ಲಿ ಮನೆಗೆ ಬರುತ್ತಿದ್ದಳು, ಆದರೆ ಅಂದು ಸೈಕಲ್​ನಲ್ಲಿ ಟ್ಯೂಷನ್​ಗೆ ಹೋಗಿದ್ದಳು ಸಂಜೆ 6 ಗಂಟೆ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಕಾಡಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಕಂಡು ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಅಸ್ಸಾಂನಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಆಕೆಗೆ ನ್ಯಾಯ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಬಾಲಕಿ ತಂದೆ ಗುವಾಹಟಿಯಲ್ಲಿದ್ದಾರೆ, ಅವರು ಆರ್ಥಿಕವಾಗಿ ಅಷ್ಟು ಸಬಲರಲ್ಲದ ಕಾರಣ ಚಿಕ್ಕಮ್ಮನ ಮನೆಗೆ ಓದಲು ಕಳುಹಿಸಿದ್ದರು. ಚಿಕ್ಕಮ್ಮ ತಿಂಗಳಿಗೆ 10 ಸಾವಿರ ರೂ. ಸಂಪಾದಿಸುತ್ತಿದ್ದು, ಶಿಕ್ಷಣ ಹಾಗೂ ಮೂಲಭೂತ ಅಗತ್ಯಗಳನ್ನು ನೋಡಿಕೊಳ್ಳುತ್ತಿದ್ದರು.

ಆಸ್ಪತ್ರೆಯಲ್ಲಿ ಮಾತನಾಡಲು ಸಾಧ್ಯವಾಗದ ಮಗಳ ಸ್ಥಿತಿ ನೋಡಿ ತುಂಬಾ ಕಷ್ಟವಾಯಿತು ಎಂದು ತಂದೆ ಹೇಳಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ತಫಾಜುಲ್ ಇಸ್ಲಾಂ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳಕ್ಕೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದರು. ಹೆಚ್ಚಿನ ತನಿಖೆ ಮುಂದುವರೆದಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:20 am, Mon, 26 August 24

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ