AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ […]

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ
ಸಾಧು ಶ್ರೀನಾಥ್​
|

Updated on:Nov 16, 2019 | 10:46 PM

Share

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ.

ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ ವಿವಾದಗಳಿಂದಲೇ ಸುದ್ದಿಯಾಗೋ ಆಶ್ರಮ. ಇಲ್ಲಿ ಧಾರ್ಮಿಕ ಕಾರ್ಯಕ್ಕಿಂತ ವಿವಾದದ ಕಾರ್ಯಗಳೇ ಹೆಚ್ಚು ಸದ್ದು ಮಾಡ್ತಿವೆ. ಬೆಂಗಳೂರು ಹೊರವಲಯದ ಬಿಡದಿ ಬಳಿ ಇರೋ ನಿತ್ಯಾನಂದ ಆಶ್ರಮ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತೆ.

ಮಹಿಳೆಯ ಮೇಲೆ ಅತ್ಯಾಚಾರದ ಆರೋಪ ಎದುರಿಸುತ್ತಿರುವ ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಹಿಂದೆ ಯುವತಿ ನಿಗೂಢವಾಗಿ ಸಾವನ್ನಪ್ಪಿದ್ದಳು. ಆದರೆ, ಈಗ ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದನ ಸರ್ವಜ್ಞ ಪೀಠ ಆಶ್ರಮದಲ್ಲೂ ಬೆಂಗಳೂರಿನ ಓರ್ವ ಯುವತಿ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.

ಯುವತಿಯನ್ನ ವಿದೇಶಕ್ಕೆ ಕಳುಹಿಸಿದ್ರಾ..? ಬೆಂಗಳೂರಿನ ದಂಪತಿ ತಮ್ಮ ಮೂರು ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ನಿತ್ಯಾನಂದನ ಬಿಡದಿ ಆಶ್ರಮಕ್ಕೆ ಸೇರಿಸಿದ್ದರು. ಬಳಿಕ ಮೂವರನ್ನು ಗುಜರಾತ್​ನ ಆಶ್ರಮಕ್ಕೆ ಕರೆದೊಯ್ಯಲಾಗಿದೆ. ಅಲ್ಲಿದ್ದ ಮೂವರಲ್ಲಿ ಇಬ್ಬರನ್ನೂ ಪೋಲೀಸರು ರಕ್ಷಿಸಿದ್ದಾರೆ. ಆದರೆ, 19 ವರ್ಷದ ಯುವತಿ ಮಾತ್ರ ನಾಪತ್ತೆಯಾಗಿದ್ದಾಳೆ.

ತಮ್ಮ ಪುತ್ರಿಯ ನಾಪತ್ತೆ ಬಗ್ಗೆ ಪೋಷಕರು ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪುತ್ರಿಯ ಮೇಲೆ ಅತ್ಯಾಚಾರ ಆಗಿರಬಹುದು ಇಲ್ಲವೇ ನಿತ್ಯಾನಂದ ತಮ್ಮ ಪುತ್ರಿಯನ್ನ ವಿದೇಶಕ್ಕೆ ಕರೆದೊಯ್ದಿರಬಹುದು ಅನ್ನೋ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.

Published On - 10:44 pm, Sat, 16 November 19

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ