AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ […]

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ
ಸಾಧು ಶ್ರೀನಾಥ್​
|

Updated on:Nov 16, 2019 | 10:46 PM

Share

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ.

ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ ವಿವಾದಗಳಿಂದಲೇ ಸುದ್ದಿಯಾಗೋ ಆಶ್ರಮ. ಇಲ್ಲಿ ಧಾರ್ಮಿಕ ಕಾರ್ಯಕ್ಕಿಂತ ವಿವಾದದ ಕಾರ್ಯಗಳೇ ಹೆಚ್ಚು ಸದ್ದು ಮಾಡ್ತಿವೆ. ಬೆಂಗಳೂರು ಹೊರವಲಯದ ಬಿಡದಿ ಬಳಿ ಇರೋ ನಿತ್ಯಾನಂದ ಆಶ್ರಮ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತೆ.

ಮಹಿಳೆಯ ಮೇಲೆ ಅತ್ಯಾಚಾರದ ಆರೋಪ ಎದುರಿಸುತ್ತಿರುವ ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಹಿಂದೆ ಯುವತಿ ನಿಗೂಢವಾಗಿ ಸಾವನ್ನಪ್ಪಿದ್ದಳು. ಆದರೆ, ಈಗ ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದನ ಸರ್ವಜ್ಞ ಪೀಠ ಆಶ್ರಮದಲ್ಲೂ ಬೆಂಗಳೂರಿನ ಓರ್ವ ಯುವತಿ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.

ಯುವತಿಯನ್ನ ವಿದೇಶಕ್ಕೆ ಕಳುಹಿಸಿದ್ರಾ..? ಬೆಂಗಳೂರಿನ ದಂಪತಿ ತಮ್ಮ ಮೂರು ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ನಿತ್ಯಾನಂದನ ಬಿಡದಿ ಆಶ್ರಮಕ್ಕೆ ಸೇರಿಸಿದ್ದರು. ಬಳಿಕ ಮೂವರನ್ನು ಗುಜರಾತ್​ನ ಆಶ್ರಮಕ್ಕೆ ಕರೆದೊಯ್ಯಲಾಗಿದೆ. ಅಲ್ಲಿದ್ದ ಮೂವರಲ್ಲಿ ಇಬ್ಬರನ್ನೂ ಪೋಲೀಸರು ರಕ್ಷಿಸಿದ್ದಾರೆ. ಆದರೆ, 19 ವರ್ಷದ ಯುವತಿ ಮಾತ್ರ ನಾಪತ್ತೆಯಾಗಿದ್ದಾಳೆ.

ತಮ್ಮ ಪುತ್ರಿಯ ನಾಪತ್ತೆ ಬಗ್ಗೆ ಪೋಷಕರು ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪುತ್ರಿಯ ಮೇಲೆ ಅತ್ಯಾಚಾರ ಆಗಿರಬಹುದು ಇಲ್ಲವೇ ನಿತ್ಯಾನಂದ ತಮ್ಮ ಪುತ್ರಿಯನ್ನ ವಿದೇಶಕ್ಕೆ ಕರೆದೊಯ್ದಿರಬಹುದು ಅನ್ನೋ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.

Published On - 10:44 pm, Sat, 16 November 19

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ