AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ […]

ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ
ಸಾಧು ಶ್ರೀನಾಥ್​
|

Updated on:Nov 16, 2019 | 10:46 PM

Share

ಗುಜರಾತ್: ನಿತ್ಯಾನಂದನ ಆಶ್ರಮಕ್ಕೂ ವಿವಾದಕ್ಕೂ ಅದೇನೋ ಸಂಬಂಧ. ಅತ್ಯಾಚಾರ ಸೇರಿ ಹಲವು ಆರೋಪ ಎದುರಿಸ್ತೀರೋ ನಿತ್ಯಾನಂದ ಆಶ್ರಮ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ.

ನಿತ್ಯಾನಂದ ಆಶ್ರಮಕ್ಕೆ ಅದೆಷ್ಟೋ ಆರೋಪಗಳು ಕೇಳಿ ಬಂದಿವೆ ಆದರೂ ಅಲ್ಲಿಗೆ ಬರೋರ ಭಕ್ತರಿಗೇನು ಕಡಿಮೆ ಇಲ್ಲ. ದೇಶ ಅಷ್ಟೆ ಅಲ್ಲದೆ ವಿದೇಶದಿಂದಲೂ ಆಶ್ರಮಕ್ಕೆ ಭಕ್ತರು ಬರ್ತಾರೆ. ಭಕ್ತಿಯ ಪರವಶೆಯಲ್ಲೇ ತೇಲ್ತಾರೆ. ಆದ್ರೀಗ ಇದೇ ನಿತ್ಯಾನಂದ ಆಶ್ರಮದ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ..! ನಿತ್ಯಾನಂದ ಆಶ್ರಮ ವಿವಾದಗಳಿಂದಲೇ ಸುದ್ದಿಯಾಗೋ ಆಶ್ರಮ. ಇಲ್ಲಿ ಧಾರ್ಮಿಕ ಕಾರ್ಯಕ್ಕಿಂತ ವಿವಾದದ ಕಾರ್ಯಗಳೇ ಹೆಚ್ಚು ಸದ್ದು ಮಾಡ್ತಿವೆ. ಬೆಂಗಳೂರು ಹೊರವಲಯದ ಬಿಡದಿ ಬಳಿ ಇರೋ ನಿತ್ಯಾನಂದ ಆಶ್ರಮ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತೆ.

ಮಹಿಳೆಯ ಮೇಲೆ ಅತ್ಯಾಚಾರದ ಆರೋಪ ಎದುರಿಸುತ್ತಿರುವ ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಹಿಂದೆ ಯುವತಿ ನಿಗೂಢವಾಗಿ ಸಾವನ್ನಪ್ಪಿದ್ದಳು. ಆದರೆ, ಈಗ ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದನ ಸರ್ವಜ್ಞ ಪೀಠ ಆಶ್ರಮದಲ್ಲೂ ಬೆಂಗಳೂರಿನ ಓರ್ವ ಯುವತಿ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.

ಯುವತಿಯನ್ನ ವಿದೇಶಕ್ಕೆ ಕಳುಹಿಸಿದ್ರಾ..? ಬೆಂಗಳೂರಿನ ದಂಪತಿ ತಮ್ಮ ಮೂರು ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ನಿತ್ಯಾನಂದನ ಬಿಡದಿ ಆಶ್ರಮಕ್ಕೆ ಸೇರಿಸಿದ್ದರು. ಬಳಿಕ ಮೂವರನ್ನು ಗುಜರಾತ್​ನ ಆಶ್ರಮಕ್ಕೆ ಕರೆದೊಯ್ಯಲಾಗಿದೆ. ಅಲ್ಲಿದ್ದ ಮೂವರಲ್ಲಿ ಇಬ್ಬರನ್ನೂ ಪೋಲೀಸರು ರಕ್ಷಿಸಿದ್ದಾರೆ. ಆದರೆ, 19 ವರ್ಷದ ಯುವತಿ ಮಾತ್ರ ನಾಪತ್ತೆಯಾಗಿದ್ದಾಳೆ.

ತಮ್ಮ ಪುತ್ರಿಯ ನಾಪತ್ತೆ ಬಗ್ಗೆ ಪೋಷಕರು ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪುತ್ರಿಯ ಮೇಲೆ ಅತ್ಯಾಚಾರ ಆಗಿರಬಹುದು ಇಲ್ಲವೇ ನಿತ್ಯಾನಂದ ತಮ್ಮ ಪುತ್ರಿಯನ್ನ ವಿದೇಶಕ್ಕೆ ಕರೆದೊಯ್ದಿರಬಹುದು ಅನ್ನೋ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.

Published On - 10:44 pm, Sat, 16 November 19

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ