AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ

ಈ ಹಿಂದೆ ಹಿಜಾಬ್ ಬ್ಯಾನ್ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯೆದ್ದಿತ್ತು. ತರಗತಿಯೊಳಗೆ ಹಿಜಾಬ್ ಧರಿಸಿ ಮುಸ್ಲಿಂ ವಿದ್ಯಾರ್ಥಿನಿ ಬರುವಂತಿಲ್ಲ ಎಂದು ನಿಯಮ ತರಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಉತ್ತರಾಖಂಡದಲ್ಲಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ತಿಲಕವಿಟ್ಟು ಬಂದಿದ್ದಕ್ಕೆ ತರಗತಿಗೆ ಪ್ರವೇಶ ನಿರಾಕರಿಸಿದ ಘಟನೆ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದೆ.

ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ
ತಿಲಕ
Follow us
ಸುಷ್ಮಾ ಚಕ್ರೆ
|

Updated on: Dec 14, 2024 | 10:09 PM

ನವದೆಹಲಿ: ಉತ್ತರಾಖಂಡದಲ್ಲಿ ಬಾಲಕಿಯೊಬ್ಬಳು ತಿಲಕ ಇಟ್ಟುಕೊಂಡು ಬಂದಿದ್ದಕ್ಕೆ ಆಕೆಗೆ ತರಗತಿಯೊಳಗೆ ಬರಲು ಅವಕಾಶ ನಿರಾಕರಿಸಲಾಯಿತು. ಇದರಿಂದ ಆಕೆ ತನ್ನ ಶಿಕ್ಷಕರ ಮಾತಿಗೆ ಒಪ್ಪಿ ತಿಲಕ ಅಳಿಸಿಕೊಂಡು ತರಗತಿಗೆ ಹಾಜರಾಗಿದ್ದಾಳೆ. ಆದರೆ ನಂತರ ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆಕೆಯ ಪೋಷಕರು, ಹಿಂದೂ ಸಂಘಟನೆಗಳೊಂದಿಗೆ ಗುರುವಾರ ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ.

ಉತ್ತರಾಖಂಡದ ರಿಷಿಕೇಶದ ಶಾಲೆಯೊಂದರಲ್ಲಿ ಹಣೆಯ ಮೇಲಿದ್ದ ತಿಲಕ ತೆಗೆಯದೆ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಗೆ ಪ್ರವೇಶಿಸಲು ಬಿಡಲಿಲ್ಲ. ಆಕೆಯ ಪೋಷಕರು ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಪ್ರೇರೇಪಿಸಿತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಕ್ಷಮೆ ಯಾಚಿಸಿದ್ದಾರೆ.

ಇದನ್ನೂ ಓದಿ: ನಾಳೆ ಕೊಡಗು ಜಿಲ್ಲಾ ಬಂದ್​ಗೆ ಕರೆ: ಖಾಸಗಿ ಶಾಲೆಗಳಿಗೆ ರಜೆ, ಕಾರಣವೇನು?

ಶಾಲಾ ಶಿಕ್ಷಣ ಮಹಾನಿರ್ದೇಶಕ ಜರ್ನಾ ಕಮ್ತಾನ್ ಅವರು ಉತ್ತರಾಖಂಡ್‌ನ ತೆಹ್ರಿ ಗರ್ವಾಲ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯನ್ನು ಬುಧವಾರ (ಡಿಸೆಂಬರ್ 11) ತನ್ನ ಶಿಕ್ಷಕರು ತನ್ನ ಹಣೆಯ ಮೇಲಿನ ತಿಲಕವನ್ನು ತೆಗೆಯುವಂತೆ ಸೂಚಿಸಿದರು. ಇಲ್ಲದಿದ್ದರೆ ಶಾಲೆಯೊಳಗೆ ಬರಲು ಒಪ್ಪುವುದಿಲ್ಲ ಎಂದು ಹೇಳಿದರು.

“ಶಿಕ್ಷಕರು ತಿಲಕವನ್ನು ತೆಗೆಯುವಂತೆ ಬಾಲಕಿಗೆ ಬಲವಂತ ಮಾಡಬಾರದಿತ್ತು. ತಿಲಕವನ್ನು ಧರಿಸುವುದು ಹಿಂದೂ ಸಂಪ್ರದಾಯವಾಗಿದೆ. ಹಿಂದೂ ಅದನ್ನು ಧರಿಸುವುದನ್ನು ತಡೆಯುವುದು ಹೇಗೆ?” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ