ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ

ಈ ಹಿಂದೆ ಹಿಜಾಬ್ ಬ್ಯಾನ್ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯೆದ್ದಿತ್ತು. ತರಗತಿಯೊಳಗೆ ಹಿಜಾಬ್ ಧರಿಸಿ ಮುಸ್ಲಿಂ ವಿದ್ಯಾರ್ಥಿನಿ ಬರುವಂತಿಲ್ಲ ಎಂದು ನಿಯಮ ತರಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಉತ್ತರಾಖಂಡದಲ್ಲಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ತಿಲಕವಿಟ್ಟು ಬಂದಿದ್ದಕ್ಕೆ ತರಗತಿಗೆ ಪ್ರವೇಶ ನಿರಾಕರಿಸಿದ ಘಟನೆ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದೆ.

ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ
ತಿಲಕ

Updated on: Dec 14, 2024 | 10:09 PM

ನವದೆಹಲಿ: ಉತ್ತರಾಖಂಡದಲ್ಲಿ ಬಾಲಕಿಯೊಬ್ಬಳು ತಿಲಕ ಇಟ್ಟುಕೊಂಡು ಬಂದಿದ್ದಕ್ಕೆ ಆಕೆಗೆ ತರಗತಿಯೊಳಗೆ ಬರಲು ಅವಕಾಶ ನಿರಾಕರಿಸಲಾಯಿತು. ಇದರಿಂದ ಆಕೆ ತನ್ನ ಶಿಕ್ಷಕರ ಮಾತಿಗೆ ಒಪ್ಪಿ ತಿಲಕ ಅಳಿಸಿಕೊಂಡು ತರಗತಿಗೆ ಹಾಜರಾಗಿದ್ದಾಳೆ. ಆದರೆ ನಂತರ ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆಕೆಯ ಪೋಷಕರು, ಹಿಂದೂ ಸಂಘಟನೆಗಳೊಂದಿಗೆ ಗುರುವಾರ ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ.

ಉತ್ತರಾಖಂಡದ ರಿಷಿಕೇಶದ ಶಾಲೆಯೊಂದರಲ್ಲಿ ಹಣೆಯ ಮೇಲಿದ್ದ ತಿಲಕ ತೆಗೆಯದೆ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಗೆ ಪ್ರವೇಶಿಸಲು ಬಿಡಲಿಲ್ಲ. ಆಕೆಯ ಪೋಷಕರು ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಪ್ರೇರೇಪಿಸಿತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಕ್ಷಮೆ ಯಾಚಿಸಿದ್ದಾರೆ.

ಇದನ್ನೂ ಓದಿ: ನಾಳೆ ಕೊಡಗು ಜಿಲ್ಲಾ ಬಂದ್​ಗೆ ಕರೆ: ಖಾಸಗಿ ಶಾಲೆಗಳಿಗೆ ರಜೆ, ಕಾರಣವೇನು?

ಶಾಲಾ ಶಿಕ್ಷಣ ಮಹಾನಿರ್ದೇಶಕ ಜರ್ನಾ ಕಮ್ತಾನ್ ಅವರು ಉತ್ತರಾಖಂಡ್‌ನ ತೆಹ್ರಿ ಗರ್ವಾಲ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯನ್ನು ಬುಧವಾರ (ಡಿಸೆಂಬರ್ 11) ತನ್ನ ಶಿಕ್ಷಕರು ತನ್ನ ಹಣೆಯ ಮೇಲಿನ ತಿಲಕವನ್ನು ತೆಗೆಯುವಂತೆ ಸೂಚಿಸಿದರು. ಇಲ್ಲದಿದ್ದರೆ ಶಾಲೆಯೊಳಗೆ ಬರಲು ಒಪ್ಪುವುದಿಲ್ಲ ಎಂದು ಹೇಳಿದರು.

“ಶಿಕ್ಷಕರು ತಿಲಕವನ್ನು ತೆಗೆಯುವಂತೆ ಬಾಲಕಿಗೆ ಬಲವಂತ ಮಾಡಬಾರದಿತ್ತು. ತಿಲಕವನ್ನು ಧರಿಸುವುದು ಹಿಂದೂ ಸಂಪ್ರದಾಯವಾಗಿದೆ. ಹಿಂದೂ ಅದನ್ನು ಧರಿಸುವುದನ್ನು ತಡೆಯುವುದು ಹೇಗೆ?” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us