AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಜಮಾಲ್ಪುರ್ ಎಂಬ ಹಳ್ಳಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಈ ವೇಳೆ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ತರಾಟೆಗೆ ತೆಗೆದುಕೊಂಡರು. ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಹಲವಾರು ಅಪರಾಧಗಳಿಗೆ ಮಮತಾ ಬ್ಯಾನರ್ಜಿ ಸರ್ಕಾರವೇ ಕಾರಣ. ಜನರು ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಆ ಅಪರಾಧಗಳನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದರು.

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ
Amit Shah In West Bengal
ಸುಷ್ಮಾ ಚಕ್ರೆ
|

Updated on: Apr 25, 2026 | 7:59 PM

Share

ಕೊಲ್ಕತ್ತಾ, ಏಪ್ರಿಲ್ 25: ಪಶ್ಚಿಮ ಬಂಗಾಳದಲ್ಲಿ ನಡೆಯುವ 2ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮಾಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯಲ್ಲಿ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಮತ್ತು ದುರ್ಗಾಪುರ ಕಾಲೇಜಿನಂತಹ ಘಟನೆಗಳು ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಎಲ್ಲೆಡೆ ನಡೆದಿವೆ ಎಂದು ಸಾಬೀತುಪಡಿಸುತ್ತಿವೆ. ಈಗ ‘ದೀದಿ’ ಮಹಿಳೆಯರು ಸಂಜೆ 7 ಗಂಟೆಯ ನಂತರ ತಮ್ಮ ಮನೆಗಳಿಂದ ಹೊರಗೆ ಹೆಜ್ಜೆ ಹಾಕಬಾರದು ಎಂದು ಹೇಳಿದ್ದಾರೆ. ಮೇ 5 ನೇ ತಾರೀಖಿನ ನಂತರ ಚಿಕ್ಕ ಹುಡುಗಿಯರಿಂದ ವಯಸ್ಸಾದ ಮಹಿಳೆಯರವರೆಗೆ ಎಲ್ಲರೂ ಮಧ್ಯರಾತ್ರಿ 1 ಗಂಟೆ ನಂತರವೂ ಭಯವಿಲ್ಲದೆ ಹೊರಗೆ ಓಡಾಡಬಹುದು. ಯಾವುದೇ ಗೂಂಡಾ ಅವಳನ್ನು ನೋಡಲು ಧೈರ್ಯ ಮಾಡುವುದಿಲ್ಲ” ಎಂದು ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅಮಿತ್ ಶಾ ಭರವಸೆ ನೀಡಿದ್ದಾರೆ.

“ಯಾವುದೇ ಬಿಜೆಪಿ ಮುಖ್ಯಮಂತ್ರಿಗಳು ಮಹಿಳೆಯರಿಗೆ ಸಂಜೆ 7 ಗಂಟೆಯ ನಂತರ ಹೊರಗೆ ಹೋಗಬೇಡಿ ಎಂದು ಹೇಳುವುದಿಲ್ಲ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಮಮತಾ ಬ್ಯಾನರ್ಜಿ ವಿಫಲರಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ದೇಶಾದ್ಯಂತ ಯಾವುದೇ ರಾಜ್ಯಗಳಲ್ಲಿಯೂ ಮುಖ್ಯಮಂತ್ರಿಗಳು ಸಂಜೆ 7 ಗಂಟೆಯ ನಂತರ ಮಹಿಳೆಯರು ತಮ್ಮ ಮನೆಗಳಿಂದ ಹೊರಗೆ ಹೋಗಬಾರದು ಎಂದು ಹೇಳಿಲ್ಲ. ಮಮತಾ ದೀದಿ, ನೀವು ನಾಚಿಕೆಪಡಬೇಕು. ನೀವು ಮಹಿಳಾ ಮುಖ್ಯಮಂತ್ರಿ. ಆದರೆ ನೀವು ಮಹಿಳೆಯರಿಗೆ ಸುರಕ್ಷತೆಯನ್ನು ಒದಗಿಸಲು ವಿಫಲರಾಗಿದ್ದೀರಿ. ಯಾವುದೇ ಗೂಂಡಾಗಳು ತಾಯಂದಿರು ಮತ್ತು ಸಹೋದರಿಯರನ್ನು ಕೆಟ್ಟ ಉದ್ದೇಶದಿಂದ ನೋಡಲು ಧೈರ್ಯ ಮಾಡಿದರೆ ಅವರನ್ನು ಜೈಲಿನಲ್ಲಿ ಹಾಕಲಾಗುವುದು ಎಂದು ಬಿಜೆಪಿ ಬಂಗಾಳದ ಜನರಿಗೆ ಭರವಸೆ ನೀಡುತ್ತದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ

152 ಕ್ಷೇತ್ರಗಳಲ್ಲಿ ಮತದಾನ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳ ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ, ಗೃಹ ಸಚಿವ ಅಮಿತ್ ಶಾ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತ್ವರಿತವಾಗಿ ಜಾರಿಗೆ ತರುವುದಾಗಿ ಪ್ರತಿಜ್ಞೆ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!