AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ

ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ.ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಅಲ್ಲಿ ಶಾಂತಿ ಕಾಪಾಡುತ್ತಿದ್ದಾರೆ. ಸಂತ್ರಸ್ತೆಯ ತಾಯಿ ದೆಹಲಿಯಲ್ಲಿ ವಾಸಿಸುತ್ತಿದ್ದು, ತನ್ನ ಕುಟುಂಬ ಸದಸ್ಯರ ವರ್ತನೆಯಿಂದ ಅತೃಪ್ತಿ ಹೊಂದಿದ್ದಾಳೆ.

ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ
ನಯನಾ ರಾಜೀವ್
|

Updated on: Dec 29, 2024 | 9:49 AM

Share

ಹಲವು ತಿಂಗಳುಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಯೊಬ್ಬರ ಜತೆ ಬಾಲಕಿ ಬಂದು ಸ್ಥಳೀಯ ಬಿಧುನಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎಸ್​ಪಿ ಅಲೋಕ್ ಹೇಳಿದರು.

ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ. ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ತಂದೆ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ, ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು.

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಅಲ್ಲಿ ಶಾಂತಿ ಕಾಪಾಡುತ್ತಿದ್ದಾರೆ. ಸಂತ್ರಸ್ತೆಯ ತಾಯಿ ದೆಹಲಿಯಲ್ಲಿ ವಾಸಿಸುತ್ತಿದ್ದು, ತನ್ನ ಕುಟುಂಬ ಸದಸ್ಯರ ವರ್ತನೆಯಿಂದ ಅತೃಪ್ತಿ ಹೊಂದಿದ್ದಾಳೆ. ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು.

ಮತ್ತಷ್ಟು ಓದಿ: ಮೂರನೇ ಬಾರಿಯೂ ಹೆಣ್ಣು ಮಗು ಹೆತ್ತಳೆಂದು ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ

ಕಳೆದ ಹಲವು ತಿಂಗಳುಗಳಿಂದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ತನ್ನನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದರು ಎಂದು ಬಾಲಕಿ ಹೇಳಿದ್ದಾಳೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು ಮತ್ತು ಪ್ರಾಥಮಿಕವಾಗಿ ಅವಳು ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಮಿಶ್ರಾ ಹೇಳಿದರು.

ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ದೂರು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದರು.

ಹಾಗೆಯೇ ಸೆಕ್ಷನ್ 64 (ಎಫ್), 65 (1), 232 ಅಡಿ ದೂರು ದಾಖಲಿಸಲಾಗಿದೆ. ಅಕ್ಟೋಬರ್‌ನಲ್ಲಿಯೂ ಔರೈಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 6 ವರ್ಷದ ಬಾಲಕಿಯ ಮೇಲಿನ ಕ್ರೌರ್ಯದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಹಗಲು ಹೊತ್ತಿನಲ್ಲಿ ವ್ಯಕ್ತಿಯೊಬ್ಬ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಆತ ಪರಾರಿಯಾಗಿದ್ದ.

ಬಾಲಕಿ ಅಳುತ್ತಿರುವುದನ್ನು ಕಂಡ ಯಾರೋ ಆಕೆಯನ್ನು ಮನೆಯ ಹೊರಗೆ ಬಿಟ್ಟಿದ್ದಾರೆ. ಸಂತ್ರಸ್ತ ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ಸದರ್ ಕೊತ್ವಾಲಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಆತ ಸದರ್ ಔರೈಯಾ ಕೊಟ್ವಾಲಿ ಪ್ರದೇಶದ ಗ್ರಾಮದ ನಿವಾಸಿ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಆಕೆಯ ದೇಹದಿಂದ ರಕ್ತ ಬರುತ್ತಿತ್ತು ಎಂದು ಬಾಲಕಿ ತಾಯಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು