AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯರು ರಾತ್ರಿ ಹೊರಗೆ ಹೋಗಬಾರದು; ಅತ್ಯಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಶಾಕಿಂಗ್ ಹೇಳಿಕೆ

ಒಡಿಶಾದ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರದ ಕಾಲೇಜು ಕ್ಯಾಂಪಸ್ ಬಳಿ ಮೂವರು ವ್ಯಕ್ತಿಗಳು ಅತ್ಯಾಚಾರ ಮಾಡಿದ್ದಾರೆ. ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒಡಿಶಾ ಮುಖ್ಯಮಂತ್ರಿ ಪಶ್ಚಿಮ ಬಂಗಾಳ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿಜೆಪಿ ಕೂಡ ದೀದಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬಂಗಾಳ ಅತ್ಯಾಚಾರಿಗಳ ಸುರಕ್ಷಿತ ಸ್ವರ್ಗವಾಗುತ್ತಿದೆ ಎಂದು ಟೀಕಿಸಿದೆ.

ಹುಡುಗಿಯರು ರಾತ್ರಿ ಹೊರಗೆ ಹೋಗಬಾರದು; ಅತ್ಯಾಚಾರದ ಬಗ್ಗೆ ಮಮತಾ ಬ್ಯಾನರ್ಜಿ ಶಾಕಿಂಗ್ ಹೇಳಿಕೆ
Mamata Banerjee
ಸುಷ್ಮಾ ಚಕ್ರೆ
|

Updated on:Oct 12, 2025 | 3:52 PM

Share

ಕೋಲ್ಕತ್ತಾ, ಅಕ್ಟೋಬರ್ 12: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರದ (Durgapur Rape Case) ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊನೆಗೂ ಮೌನ ಮುರಿದಿದ್ದಾರೆ. ಆದರೆ, ಅವರು ಇಂದು ನೀಡಿರುವ ಪ್ರತಿಕ್ರಿಯೆಗೆ ಮತ್ತೆ ಆಕ್ರೋಶ ವ್ಯಕ್ತವಾಗಿದೆ. ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, “ಒಬ್ಬ ಹುಡುಗಿಯನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಹೆಣ್ಣುಮಕ್ಕಳು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕು” ಎಂದು ಹೇಳಿದ್ದಾರೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿಯಾದವರು ಈ ರೀತಿ ಬೇಜವಾಬ್ದಾರಿಯ ಹೇಳಿಕೆ ನೀಡಬಾರದು ಎಂದು ಹಲವರು ಟೀಕಿಸಿದ್ದಾರೆ.

“ಈ ಅತ್ಯಾಚಾರ ನಡೆದಿರುವುದು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ. ಹೀಗಾಗಿ, ಇದಕ್ಕೆ ನಮ್ಮ ಸರ್ಕಾರವನ್ನು ದೂಷಿಸುವುದು ಅನ್ಯಾಯ. ಖಾಸಗಿ ಕಾಲೇಜು ಅಧಿಕಾರಿಗಳು ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಾಗಿತ್ತು. ಮಧ್ಯರಾತ್ರಿ 12.30ಕ್ಕೆ ಆ ಹುಡುಗಿ ಏಕೆ ಹೊರಗೆ ಬಂದಳು? ಹಾಗಾದರೆ, ಕಾಲೇಜಿನಲ್ಲಿ ಭದ್ರತೆ ವ್ಯವಸ್ಥೆ ಇಲ್ಲವೇ? ಆ ದಿನ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಹುಡುಗಿಯರು ರಾತ್ರಿ ವೇಳೆ ಕಾಲೇಜಿನಿಂದ ಹೊರಗೆ ಹೋಗುವುದು ಸುರಕ್ಷಿತವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

“ಹುಡುಗಿಯರು ರಾತ್ರಿಯಲ್ಲಿ ಹೊರಗೆ ಹೋಗಲು ಕಾಲೇಜಿನವರು ಬಿಡಬಾರದು. ಹುಡುಗಿಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಸುತ್ತ ಅರಣ್ಯ ಪ್ರದೇಶವಿದೆ. ಪೊಲೀಸರು ಎಲ್ಲ ಜನರನ್ನು ಶೋಧಿಸುತ್ತಿದ್ದಾರೆ. ಯಾರನ್ನೂ ಕ್ಷಮಿಸಲಾಗುವುದಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮಣಿಪುರ, ಉತ್ತರ ಪ್ರದೇಶ, ಬಿಹಾರ, ಒಡಿಶಾದಲ್ಲಿಯೂ ಇಂತಹ ಘಟನೆಗಳು ನಡೆದಿವೆ. ಆಗ ಅಲ್ಲಿನ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಂಡಿತ್ತು? ನಮ್ಮ ರಾಜ್ಯದಲ್ಲಿ, ನಾವು 1-2 ತಿಂಗಳೊಳಗೆ ಜನರ ವಿರುದ್ಧ ಚಾರ್ಜ್‌ಶೀಟ್ ಹಾಕಿದ್ದೇವೆ ಮತ್ತು ಕೆಳ ನ್ಯಾಯಾಲಯವು ಆರೋಪಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಶುಕ್ರವಾರ ತಡರಾತ್ರಿ ಕೋಲ್ಕತ್ತಾದಿಂದ ಸುಮಾರು 170 ಕಿ.ಮೀ ದೂರದಲ್ಲಿರುವ ದುರ್ಗಾಪುರದ ಶೋಭಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಆವರಣದ ಬಳಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಒಡಿಶಾದ ಜಲೇಶ್ವರ ಮೂಲದ 23 ವರ್ಷದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಊಟ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ದಾಳಿ ನಡೆಸಲಾಗಿತ್ತು. ಮೂವರು ವ್ಯಕ್ತಿಗಳು ಸಂತ್ರಸ್ತೆಯ ಬಳಿಗೆ ಬಂದು, ಆಕೆಯ ಫೋನ್ ಕಸಿದುಕೊಂಡು, ಹತ್ತಿರದ ಅರಣ್ಯ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಹಲ್ಲೆಯ ನಂತರ, ಆರೋಪಿಗಳು ಆಕೆಯ ಫೋನ್ ಹಿಂತಿರುಗಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳ ಬಂಧನವನ್ನು ಪಶ್ಚಿಮ ಬಂಗಾಳ ಪೊಲೀಸರು ದೃಢಪಡಿಸಿದ್ದಾರೆ ಮತ್ತು ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಈ ಘಟನೆಯು ಕಳೆದ ವರ್ಷದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣದ ನೆನಪುಗಳನ್ನು ಮತ್ತೆ ಹುಟ್ಟುಹಾಕಿದೆ, ಇದು ವ್ಯಾಪಕ ಖಂಡನೆ ಮತ್ತು ರಾಜಕೀಯ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Sun, 12 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?