AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿಗಳಿಗೆ ಕೋಮು ಸ್ಪರ್ಶ ಕೊಡುವ ವೆಬ್​ಪೋರ್ಟಲ್, ಸೋಷಿಯಲ್​ ಮೀಡಿಯಾಗಳ ವಿರುದ್ಧ ಸಿಜೆಐ ಎನ್​.ವಿ.ರಮಣ ಅಸಮಾಧಾನ

ಟ್ವಿಟರ್​, ಫೇಸ್​ಬುಕ್​ ಅಥವಾ ಯೂಟ್ಯೂಬ್​ ಇರಲಿ. ನಾವು ಏನೇ ಕೇಳಿದರೂ ಅದಕ್ಕೆ ಅವರು ಪ್ರತಿಕ್ರಿಯೆ, ಸ್ಪಂದನೆ ನೀಡುವುದಿಲ್ಲ. ಕೆಲವು ವಿಷಯಗಳನ್ನು ಎಷ್ಟು ಕೆಟ್ಟದಾಗಿ ಬೇಕಾದರೂ ಬಿಂಬಿಸುತ್ತಾರೆ ಎಂದು ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಬೇಸರ ವ್ಯ

ಸುದ್ದಿಗಳಿಗೆ ಕೋಮು ಸ್ಪರ್ಶ ಕೊಡುವ ವೆಬ್​ಪೋರ್ಟಲ್,  ಸೋಷಿಯಲ್​ ಮೀಡಿಯಾಗಳ ವಿರುದ್ಧ ಸಿಜೆಐ ಎನ್​.ವಿ.ರಮಣ ಅಸಮಾಧಾನ
ನ್ಯಾಯಮೂರ್ತಿ ರಮಣ
TV9 Web
| Edited By: |

Updated on:Sep 02, 2021 | 4:20 PM

Share

ಕೆಲವು ಆನ್​​ಲೈನ್​  ಸುದ್ದಿಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾ (Social Media)ಗಳಲ್ಲಿ ಒಂದಷ್ಟು ಸುದ್ದಿಗಳಿಗೆ ಕೋಮು ಬಣ್ಣ ಬಳಿಯುವ ಪ್ರಯತ್ನಗಳು ಹೆಚ್ಚಾಗುತ್ತಿವೆ. ಇಂಥ ಪ್ರವೃತ್ತಿ ದೇಶಕ್ಕೆ ಕೆಟ್ಟ ಹೆಸರು ತರುತ್ತದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ  (CJI N V Ramana)ಹೇಳಿದರು. ಹಾಗೇ, ವೆಬ್​ ಪೋರ್ಟಲ್​ಗಳನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಪ್ರಭಾವಶಾಲಿ ಜನರ ಮಾತುಗಳನ್ನಷ್ಟೇ ಕೇಳುತ್ತವೆ. ಯಾವುದೇ ಸಂಸ್ಥೆ ಅಥವಾ ಸಾಮಾನ್ಯ ಜನರ ಬಗ್ಗೆ ಅವುಗಳ ಗಮನವಿಲ್ಲ ಎಂದೂ ವಿಷಾದ ವ್ಯಕ್ತಪಡಿಸಿದರು.

ಕೊರೊನಾ ಪ್ರಾರಂಭದ ದಿನಗಳಲ್ಲಿ ದೆಹಲಿಯ ನಿಜಾಮುದ್ದೀನ್​ ಮರ್ಕಜ್​​ನಲ್ಲಿ ತಬ್ಲಿಘಿ ಜಮಾತ್​ ಸಮಾವೇಶ ನಡೆದಿತ್ತು. ಆ ಸಮಾವೇಶ ಕೊರೊನಾ ಸೋಂಕಿನ ಸೂಪರ್​ಸ್ಪ್ರೆಡರ್​ ಆಗಿ ಬದಲಾಗಿತ್ತು. ದೇಶ-ವಿದೇಶಗಳ ಸಾವಿರಾರು ಮುಸ್ಲಿಮರು ಭಾಗಿಯಾಗಿದ್ದರು. ನಂತರ ತಮ್ಮತಮ್ಮ ವಾಸಸ್ಥಳಕ್ಕೆ ತೆರಳಿದ್ದರು. ಅದು ಕೊರೊನಾ ಮಿತಿಮೀರಲು ಪ್ರಮುಖ ಕಾರಣವಾಗಿತ್ತು. ಆದರೆ ಅಂದು ಈ ಬಗ್ಗೆ ವರದಿ ಮಾಡುವ ಭರದಲ್ಲಿ ಹಲವು ಮಾಧ್ಯಮಗಳು ಸುದ್ದಿಗೆ ಕೋಮು ಸ್ಪರ್ಶ ನೀಡಿವೆ. ಅಂಥ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಲವರು ಸುಪ್ರೀಂಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಎನ್​. ವಿ.ರಮಣ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವಿಟರ್​, ಫೇಸ್​ಬುಕ್​ ಅಥವಾ ಯೂಟ್ಯೂಬ್​ ಇರಲಿ. ನಾವು ಏನೇ ಕೇಳಿದರೂ ಅದಕ್ಕೆ ಅವರು ಪ್ರತಿಕ್ರಿಯೆ, ಸ್ಪಂದನೆ ನೀಡುವುದಿಲ್ಲ. ಕೆಲವು ವಿಷಯಗಳನ್ನು ಎಷ್ಟು ಕೆಟ್ಟದಾಗಿ ಬೇಕಾದರೂ ಬಿಂಬಿಸುತ್ತಾರೆ. ಅದನ್ನು ಪ್ರಶ್ನೆ ಮಾಡಿದರೆ ಉತ್ತರವೂ ಸಿಗುವುದಿಲ್ಲ. ಅಂಥ ಸೋಷಿಯಲ್​ ಮೀಡಿಯಾ ಮತ್ತು ವೆಬ್​ಪೋರ್ಟಲ್​ಗಳು ಪ್ರಭಾವಿಗಳ ಬಗ್ಗೆ ಮಾತ್ರ ಗಮನಕೊಡುತ್ತವೆ ಹೊರತು..ನಮ್ಮಂಥ ನ್ಯಾಯಾಧೀಶರು, ಸಾಮಾನ್ಯ ಜನರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ನೀವು ಯೂಟ್ಯೂಬ್​ಗೆ ಹೋಗಿ ನೋಡಿ..ಅಲ್ಲಿ ಒಂದೇ ನಿಮಿಷದಲ್ಲಿ ಎಷ್ಟೆಷ್ಟೋ ವಿಚಾರಗಳನ್ನು ತೋರಿಸುತ್ತಾರೆ. ಅದು ಎಷ್ಟು ಫೇಕ್​ ಎಂಬುದು ನಿಮಗೆ ಗೊತ್ತಾಗುತ್ತದೆ. ಇನ್ನು ವೆಬ್​ಪೋರ್ಟಲ್​ಗಳಿಗೂ ಯಾರೂ ಕಡಿವಾಣ ಹಾಕುವವರಿಲ್ಲ. ಇದನ್ನೇ ದುರುಪಯೋಗಪಡಿಸಿಕೊಂಡು ಅದೆಷ್ಟೋ ಸುದ್ದಿಗಳನ್ನು ಸುಖಾಸುಮ್ಮನೆ ಕೋಮು ಆಯಾಮದಲ್ಲಿ ಪ್ರಕಟಿಸುತ್ತವೆ. ಇದು ದೇಶಕ್ಕೆ ಕೆಟ್ಟಹೆಸರು ತರುತ್ತದೆ ಎಂದು ಸಿಜೆಐ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಯಲ್ಲಿ ವಿದೇಶಿ ತಳಿಗಳ ಎತ್ತುಗಳನ್ನು ಬಳಸುವಂತಿಲ್ಲ: ಮದ್ರಾಸ್​ ಹೈಕೋರ್ಟ್ ಆದೇಶ

ಪೌರ ಕಾರ್ಮಿಕರಿಗೆ ಸದ್ಯದಲ್ಲೇ ಕೈಮಗ್ಗದ ಸಮವಸ್ತ್ರ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹೊಸ ಪ್ರಯೋಗ

Published On - 4:07 pm, Thu, 2 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ