AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Hunger Index: ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕೆ 107ನೇ ಸ್ಥಾನ; ದೇಶದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಎಂದ ಸರ್ಕಾರ

ಈ ಸೂಚ್ಯಂಕವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರವು, ‘ಇದು ತಪ್ಪು ಮಾಹಿತಿ ಮತ್ತು ವಿಶ್ಲೇಷಣೆಗಳನ್ನು ಒಳಗೊಂಡಿದೆ’ ಎಂದು ಅಭಿಪ್ರಾಯಪಟ್ಟಿದೆ.

Global Hunger Index: ಹಸಿವಿನ ಸೂಚ್ಯಂಕದಲ್ಲಿ ಭಾರತಕ್ಕೆ 107ನೇ ಸ್ಥಾನ; ದೇಶದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಎಂದ ಸರ್ಕಾರ
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಮತ್ತೆ ಕುಸಿದಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 16, 2022 | 7:46 AM

ದೆಹಲಿ: ಜಾಗತಿಕ ಹಸಿವು ಸೂಚ್ಯಂಕ (Global Hunger Index – GHI) ಶನಿವಾರ (ಅ 15) ಬಿಡುಗಡೆ ಆಗಿದೆ. ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ಆರು ಸ್ಥಾನ ಕಡಿಮೆಯಾಗಿದೆ. ಈ ಸೂಚ್ಯಂಕಕ್ಕಾಗಿ ಪರಿಗಣಿಸಲಾಗಿದ್ದ 121 ದೇಶಗಳ ಪೈಕಿ ಭಾರತವು 107ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರವು, ‘ಇದು ತಪ್ಪು ಮಾಹಿತಿ ಮತ್ತು ವಿಶ್ಲೇಷಣೆಗಳನ್ನು ಒಳಗೊಂಡಿದೆ’ ಎಂದು ಅಭಿಪ್ರಾಯಪಟ್ಟಿದೆ.

‘ಕಳೆದ 22 ವರ್ಷಗಳಲ್ಲಿ (2000ರಿಂದ) ಭಾರತವು ಗಣನೀಯ ಪ್ರಗತಿ ಸಾಧಿಸಿದೆ. ಆದರೆ ಮಕ್ಕಳ ಪೋಷಣೆಗೆ ಸಂಬಂಧಿಸಿದಂತೆ ಇನ್ನೂ ಒಂದಿಷ್ಟು ಕೆಲಸ ಆಗಬೇಕಿದೆ’ ಎಂದು ವರದಿಯು ತಿಳಿಸಿದೆ. ‘ಭಾರತದ ಜಿಎಚ್ಐ ಸ್ಕೋರ್ 2000ನೇ ಇಸವಿಯಲ್ಲಿ 38.8 ಅಂಕಗಳಿತ್ತು. ಇದು ಅಪಾಯಕಾರಿ ಪರಿಸ್ಥಿತಿ ಎಂದು ಪರಿಗಣಿಸಲಾಗಿತ್ತು. 2022ರಲ್ಲಿ ಭಾರತದ ಸ್ಕೋರ್ 29.1ಕ್ಕೆ ಪ್ರಗತಿ ಕಂಡಿದೆ. ಇದು ಗಂಭೀರ ಪರಿಸ್ಥಿತಿ, ಆದರೆ ಅಪಾಯಕಾರಿ ಅಲ್ಲ ಎಂದು ಸೂಚ್ಯಂಕ ಸಿದ್ಧಪಡಿಸಿರುವ ವಿಶ್ಲೇಷಕರು ಹೇಳಿದ್ದಾರೆ. ಭಾರತದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಭಾರತದ ಅನುಪಾತವು ಮಧ್ಯಮಮಟ್ಟದಲ್ಲಿ ಇದೆ. 5 ವರ್ಷಗಳಿಗಿಂತಲೂ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣವು ಕಡಿಮೆ. ಆದರೆ ವಯಸ್ಸಿಗೆ ತಕ್ಕಷ್ಟು ತೂಕ ಹೊಂದಿರದ ಮಕ್ಕಳ ಪ್ರಮಾಣವು ಶೇ 19.3ರಷ್ಟು ಇದೆ. ಇದು ಜಗತ್ತಿನಲ್ಲಿಯೇ ಅಧಿಕ ಎಂದು ವರದಿಯು ತಿಳಿಸಿದೆ.

ಜಾಗತಿಕ ಹಸಿವು ಸೂಚ್ಯಂಕ ವರದಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ‘ತನ್ನ ಜನರ ಆಹಾರ ಮತ್ತು ಪೌಷ್ಟಿಕಾಂಶದ ಅಗತ್ಯವನ್ನು ಪೂರೈಸಲು ವಿಫಲವಾಗಿರುವ ದೇಶ ಎಂದು ಬಿಂಬಿಸುವ ಮೂಲಕ ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಐರ್ಲೆಂಡ್ ಮತ್ತು ಜರ್ಮನಿಯ ಸರ್ಕಾರೇತರ ಸಂಸ್ಥೆಗಳಾದ ಕನ್ಸರ್ನ್ ವರ್ಲೆಂಡ್ ಮತ್ತು ವೆಲ್ಟ್ ಹಂಗರ್ ಹಿಲ್ಫ್ ಈ ವರದಿಯನ್ನು ಬಿಡುಗಡೆ ಮಾಡಿವೆ. 121 ದೇಶಗಳ ಪಟ್ಟಿಯಲ್ಲಿ ಭಾರತವು 107ನೇ ಸ್ಥಾನದಲ್ಲಿದೆ.

‘ವಾಸ್ತವದಿಂದ ಸಂಪರ್ಕ ಕಡಿದುಕೊಂಡಿರುವ ವರದಿ’ ಎಂದು ಹಸಿವು ಸೂಚ್ಯಂಕ ವರದಿಗೆ ಸಚಿವಾಲಯವು ಆಕ್ಷೇಪ ವ್ಯಕ್ತಪಡಿಸಿದೆ. ಕೊವಿಡ್ ಪಿಡುಗು ವ್ಯಾಪಕವಾಗಿ ಹರಡಿದ್ದ ಸಂದರ್ಭದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ. ಭಾರತ ಸರ್ಕಾರವು ವಿಶ್ವದಲ್ಲಿಯೇ ಅತಿದೊಡ್ಡ ಆಹಾರ ಭದ್ರತಾ ಕಾರ್ಯಕ್ರಮವನ್ನು ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೇಳಿದೆ.

ಪಾಕಿಸ್ತಾನ, ನೇಪಾಳ, ಬಾಂಗ್ಲಾಕ್ಕಿಂತ ಹಿಂದುಳಿದ ಭಾರತ

ಭಾರತವು 121 ದೇಶಗಳ ಜಾಗತಿಕ ಹಸಿವು ಸೂಚ್ಯಂಕ (GHI) 2022ರಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ 6 ಸ್ಥಾನ ಕುಸಿತ ಕಂಡಿದೆ. 2021ರಲ್ಲಿ 101ನೇ ಸ್ಥಾನದಲ್ಲಿದ್ದ ಭಾರತ (India) ಈ ವರ್ಷ 107ನೇ ಸ್ಥಾನಕ್ಕೆ ಕುಸಿದಿದೆ. ಯುದ್ಧಪೀಡಿತ ದೇಶವಾದ ಅಫ್ಘಾನಿಸ್ತಾನವನ್ನು (Afghanistan) ಹೊರತುಪಡಿಸಿ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತಲೂ ಭಾರತ ಹಿಂದುಳಿದಿದೆ. ನೆರೆಯ ಪಾಕಿಸ್ತಾನ- 99, ಶ್ರೀಲಂಕಾ- 64, ಬಾಂಗ್ಲಾದೇಶ- 84, ನೇಪಾಳ-81 ಮತ್ತು ಮಯನ್ಮಾರ್- 71ನೇ ಸ್ಥಾನವನ್ನು ಪಡೆದಿವೆ. ಈ ಎಲ್ಲಾ ದೇಶಗಳು ಭಾರತಕ್ಕಿಂತ ಮೇಲಿವೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕಿಂತ ಕೆಳಗಿರುವ ದೇಶಗಳೆಂದರೆ, ಜಾಂಬಿಯಾ, ಅಫ್ಘಾನಿಸ್ತಾನ್, ಟಿಮೋರ್-ಲೆಸ್ಟೆ, ಗಿನಿಯಾ-ಬಿಸ್ಸಾವ್, ಸಿಯೆರಾ ಲಿಯೋನ್, ಲೆಸೊಥೊ, ಲೈಬೀರಿಯಾ, ನೈಜರ್, ಹೈಟಿ, ಚಾಡ್, ಡೆಮ್. ಕಾಂಗೋ, ಮಡಗಾಸ್ಕರ್, ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಯೆಮೆನ್.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ