AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು
Go First Airlines
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 4:38 PM

Share

ಹೊಸದಿಲ್ಲಿ: ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ. ಇಂದು (ಮೇ 2) ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ಎಲ್ಲ ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ  ಎಂದು ವರದಿ ತಿಳಿಸಿದೆ. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ.

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿದೆ ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದಾರೆ. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಇದನ್ನೂ ಓದಿ: Go First Airline: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

ಇದು ದುರದೃಷ್ಟಕರ ನಿರ್ಧಾರವಾಗಿದೆ (ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗೆ ಸಲ್ಲಿಸುವುದು) ಆದರೆ ಕಂಪನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಇದನ್ನು ಮಾಡಬೇಕಾಗಿದೆ ಎಂದು ಕೌಶಿಕ್ ಖೋನಾ ಹೇಳಿದರು. ವಿಮಾನಯಾನ ಸಂಸ್ಥೆಯು ಈ ಬೆಳವಣಿಗೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದೆ ಮತ್ತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ಗೆ (ಡಿಜಿಸಿಎ) ವಿವರವಾದ ವರದಿಯನ್ನು ಸಲ್ಲಿಸಲಿದೆ.

ಮೇ 3 ಮತ್ತು 4ರಂದು ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು. NCLT ಒಮ್ಮೆ ಅರ್ಜಿಯನ್ನು ಒಪ್ಪಿಕೊಂಡರೆ, ನಂತರ ವಿಮಾನಗಳನ್ನು ಪುನರಾರಂಭಿಸಲಾಗುವುದು ಎಂದು ಖೋನಾ ಹೇಳಿದರು. ಗೋ ಫಸ್ಟ್ 5,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು. ಇದೀಗ ಈ ನಿರ್ಧಾರ ಭಾರೀ ನಷ್ಟವನ್ನು ಉಂಟು ಮಾಡಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 2 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!