AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು
Go First Airlines
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 4:38 PM

Share

ಹೊಸದಿಲ್ಲಿ: ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ. ಇಂದು (ಮೇ 2) ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ಎಲ್ಲ ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ  ಎಂದು ವರದಿ ತಿಳಿಸಿದೆ. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ.

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿದೆ ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದಾರೆ. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಇದನ್ನೂ ಓದಿ: Go First Airline: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

ಇದು ದುರದೃಷ್ಟಕರ ನಿರ್ಧಾರವಾಗಿದೆ (ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗೆ ಸಲ್ಲಿಸುವುದು) ಆದರೆ ಕಂಪನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಇದನ್ನು ಮಾಡಬೇಕಾಗಿದೆ ಎಂದು ಕೌಶಿಕ್ ಖೋನಾ ಹೇಳಿದರು. ವಿಮಾನಯಾನ ಸಂಸ್ಥೆಯು ಈ ಬೆಳವಣಿಗೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದೆ ಮತ್ತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ಗೆ (ಡಿಜಿಸಿಎ) ವಿವರವಾದ ವರದಿಯನ್ನು ಸಲ್ಲಿಸಲಿದೆ.

ಮೇ 3 ಮತ್ತು 4ರಂದು ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು. NCLT ಒಮ್ಮೆ ಅರ್ಜಿಯನ್ನು ಒಪ್ಪಿಕೊಂಡರೆ, ನಂತರ ವಿಮಾನಗಳನ್ನು ಪುನರಾರಂಭಿಸಲಾಗುವುದು ಎಂದು ಖೋನಾ ಹೇಳಿದರು. ಗೋ ಫಸ್ಟ್ 5,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು. ಇದೀಗ ಈ ನಿರ್ಧಾರ ಭಾರೀ ನಷ್ಟವನ್ನು ಉಂಟು ಮಾಡಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 2 May 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!