AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು
Go First Airlines
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 4:38 PM

Share

ಹೊಸದಿಲ್ಲಿ: ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ. ಇಂದು (ಮೇ 2) ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ಎಲ್ಲ ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ  ಎಂದು ವರದಿ ತಿಳಿಸಿದೆ. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ.

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿದೆ ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದಾರೆ. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಇದನ್ನೂ ಓದಿ: Go First Airline: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

ಇದು ದುರದೃಷ್ಟಕರ ನಿರ್ಧಾರವಾಗಿದೆ (ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗೆ ಸಲ್ಲಿಸುವುದು) ಆದರೆ ಕಂಪನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಇದನ್ನು ಮಾಡಬೇಕಾಗಿದೆ ಎಂದು ಕೌಶಿಕ್ ಖೋನಾ ಹೇಳಿದರು. ವಿಮಾನಯಾನ ಸಂಸ್ಥೆಯು ಈ ಬೆಳವಣಿಗೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದೆ ಮತ್ತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ಗೆ (ಡಿಜಿಸಿಎ) ವಿವರವಾದ ವರದಿಯನ್ನು ಸಲ್ಲಿಸಲಿದೆ.

ಮೇ 3 ಮತ್ತು 4ರಂದು ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು. NCLT ಒಮ್ಮೆ ಅರ್ಜಿಯನ್ನು ಒಪ್ಪಿಕೊಂಡರೆ, ನಂತರ ವಿಮಾನಗಳನ್ನು ಪುನರಾರಂಭಿಸಲಾಗುವುದು ಎಂದು ಖೋನಾ ಹೇಳಿದರು. ಗೋ ಫಸ್ಟ್ 5,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು. ಇದೀಗ ಈ ನಿರ್ಧಾರ ಭಾರೀ ನಷ್ಟವನ್ನು ಉಂಟು ಮಾಡಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 2 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ