AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Floods: ಗೋವಾದಲ್ಲಿ 40 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ; ನೂರಾರು ಜನರ ರಕ್ಷಣೆ, ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸರ್ವನಾಶ

ಬಿಚೋಲಿಮ್ ತಾಲೂಕಿನ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಕೊಟ್ಟಿದ್ದು, ಅಲ್ಲಿನ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ.

Goa Floods: ಗೋವಾದಲ್ಲಿ 40 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ; ನೂರಾರು ಜನರ ರಕ್ಷಣೆ, ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸರ್ವನಾಶ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​
TV9 Web
| Edited By: |

Updated on: Jul 24, 2021 | 9:55 AM

Share

ಕಳೆದ 40 ವರ್ಷಗಳಲ್ಲೇ ಕಂಡರಿಯದಷ್ಟು ಭೀಕರ ಪ್ರವಾಹಕ್ಕೆ ಗೋವಾ (Goa Floods) ತತ್ತರಿಸಿದೆ. ಮಳೆ ಸಂಬಂಧ ದುರ್ಘಟನೆಯಿಂದ ಇದುವರೆಗೆ ಒಂದು ಸಾವಾಗಿದ್ದು, ಬರೋಬ್ಬರಿ 1,000 ಮನೆಗಳಿಗೆ ಹಾನಿಯಾಗಿದೆ. ವಿಪರೀತ ಮಳೆಯಿಂದ ಜಲಾವೃತಗೊಂಡಿರುವ ಕೆಳಪ್ರದೇಶಗಳಿಂದ ನೂರಾರು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಅದರಲ್ಲೂ ಗೋವಾದ ಸತ್ತಾರಿ, ಬಿಚೋಲಿಮ್​, ಪೊಂಡಾ, ಧರ್ಬಂಡೋರಾ, ಬಾರ್ಡೆಜ್ ಮತ್ತು ಪರ್ನೆಮ್ ತಾಲೂಕುಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರವಾಹ ಉಂಟಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್​ ಸಾವಂತ್ (Pramod Sawant)​ ತಿಳಿಸಿದ್ದಾರೆ.

ಬಿಚೋಲಿಮ್ ತಾಲೂಕಿನ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಕೊಟ್ಟಿದ್ದು, ಅಲ್ಲಿನ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಸದ್ಯಕ್ಕಂತೂ ಮಳೆ, ಪ್ರವಾಹ ಹೆಚ್ಚಾದ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

ಗೋವಾ 1982ರಿಂದ ಈಚೆಗೆ ಇಂಥ ಭೀಕರ ಪ್ರವಾಹವನ್ನು ಕಂಡಿರಲಿಲ್ಲ. ಈಗ ಸುಮಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗಳು ಸರ್ವನಾಶವಾಗಿದೆ. ವಿಪತ್ತು ನಿರ್ವಹಣಾ ತಂಡಗಳು ಶುಕ್ರವಾರದಿಂದಲೂ ಎಡಬಿಡದೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಪ್ರಮೋದ್​ ಸಾವಂತ್​ ಮಾಹಿತಿ ನೀಡಿದ್ದಾರೆ. ಉತ್ತರ ಗೋವಾದ ಪರ್ನೆಮ್​ ತಾಲೂಕಿನ ಚಪೋರಾ ನದಿ, ಅಪಾಯ ಮಟ್ಟವನ್ನೂ ಮೀರಿ ಹರಿಯುತ್ತಿದ್ದು, ಕೆಳ ಪ್ರದೇಶದಲ್ಲಿರುವ ಸುಮಾರು 88 ಮನೆಗಳಿಗೆ ಹಾನಿಯನ್ನುಂಟು ಮಾಡಿದೆ. ಈ ನದಿಯಿಂದಾಗಿ ಬಾರ್ಡೆಜ್ ತಾಲೂಕಿನ 167 ಮನೆಗಳಿಗೆ ಹಾನಿಯಾಗಿದೆ ಎಂದು ಸಾವಂತ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Vegetable Roll: ಉಳಿದ ಅನ್ನವನ್ನು ಏನು ಮಾಡಬೇಕು ಎಂಬ ಗೊಂದಲದಲ್ಲಿದ್ದರೆ ಈ ವಿಧಾನವನ್ನು ಒಮ್ಮೆ ಟ್ರೈ ಮಾಡಿ​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ