AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಚ್​​ ರೆಸ್ಟೋರೆಂಟ್​​ಗಳಲ್ಲಿ ‘ಮೀನು ಕರಿ-ರೈಸ್’ ಕಡ್ಡಾಯಗೊಳಿಸಿದ ಗೋವಾ ಸರ್ಕಾರ

ಗೋವಾದ ಬೀಚ್​​​​ಗಳ ಎಲ್ಲ ರೆಸ್ಟೋರೆಂಟ್​​ಗಳಲ್ಲಿ ರಾಜ್ಯದ ಪ್ರಮುಖ ಆಹಾರವಾದ 'ಮೀನು ಕರಿ-ರೈಸ್'ನ್ನು ತಮ್ಮ ಮೆನುಗಳಲ್ಲಿ ಸೇರಿಸಬೇಕು ಎಂದು ಸರ್ಕಾರ ಆದೇಶ ನೀಡಿದೆ. 'ಮೀನು ಕರಿ-ರೈಸ್' ರಾಜ್ಯದಲ್ಲಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲೂ ಪ್ರಸಿದ್ಧತೆಯನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ಬೀಚ್​​ ರೆಸ್ಟೋರೆಂಟ್​​ಗಳಲ್ಲಿ 'ಮೀನು ಕರಿ-ರೈಸ್' ಕಡ್ಡಾಯಗೊಳಿಸಿದ ಗೋವಾ ಸರ್ಕಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 09, 2023 | 11:32 AM

Share

ಪಣಜಿ, ಅ.9: ಇನ್ನು ಮುಂದೆ ಗೋವಾದ ಬೀಚ್​​​​ಗಳ ಎಲ್ಲ ರೆಸ್ಟೋರೆಂಟ್​​ಗಳಲ್ಲಿ ರಾಜ್ಯದ ಪ್ರಮುಖ ಆಹಾರವಾದ ‘ಮೀನು ಕರಿ-ರೈಸ್’ನ್ನು(fish curry-rice) ತಮ್ಮ ಮೆನುಗಳಲ್ಲಿ ಸೇರಿಸಬೇಕು ಎಂದು ಸರ್ಕಾರ ಆದೇಶ ನೀಡಿದೆ. ‘ಮೀನು ಕರಿ-ರೈಸ್’ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲೂ ಪ್ರಸಿದ್ಧತೆಯನ್ನು ಪಡೆಯಬೇಕು ಎಂದು ಹೇಳಿದ್ದಾರೆ. ಗೋವಾದ ರೆಸ್ಟೋರೆಂಟ್​​ಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪಾಕಪದ್ಧತಿಗಳನ್ನು ಅಂದರೆ ಈ ಮೆನುಗಳಲ್ಲಿ ನಮ್ಮ ರಾಜ್ಯದ ‘ಮೀನು ಕರಿ-ರೈಸ್’ ನ್ನು ಕೂಡ ನೀಡಬೇಕು ಎಂದು ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಹೇಳಿದ್ದಾರೆ. ತೆಂಗಿನಕಾಯಿ, ರುಚಿಯಾದ ಮಸಾಲೆ ಹಾಕಿ ಮಾಡಿದ ಮೀನು ಕರಿಯನ್ನು ಪ್ರವಾಸಿಗರಿಗೆ ನೀಡಬೇಕು. ಇದರ ಜತೆಗೆ ದೇಶ- ವಿದೇಶದಲ್ಲಿ ನಮ್ಮ ಆಹಾರ ಪರಿಚಯವಾಗಬೇಕು, ಅದಕ್ಕಾಗಿ ನಿಮ್ಮ ರೆಸ್ಟೋರೆಂಟ್ ಮೆನುಗಳಲ್ಲಿ ಇದನ್ನು ಸೇರಿಸಿ ಎಂದು ಹೇಳಲಾಗಿದೆ.

ಈ ಹಿಂದೆ ಗೋವಾ ಬೀಚ್​​ಗಳ ಹೊಟೇಲ್​​ಗಳಲ್ಲಿ ಉತ್ತರ ಭಾರತದ ಆಹಾರಗಳನ್ನು ಮಾತ್ರ ನೀಡಲಾಗಿತ್ತು. ಗೋವಾದ ಭಕ್ಷ್ಯಗಳು ಇರಲಿಲ್ಲ ಎಂದು ಸಚಿವರು ಹೇಳಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿ ಎಲ್ಲ ರೆಸ್ಟೋರೆಂಟ್​​ಗಳಲ್ಲಿ ಗೋವಾದ ಆಹಾರಗಳನ್ನು ನೀಡಬೇಕು ಹಾಗೂ ಪ್ರದರ್ಶನ ಮಾಡಬೇಕು ಎಂದು ಹೇಳಿದ್ದಾರೆ.

ನಾವು ನಮ್ಮ ರಾಜ್ಯದ ಶ್ರೀಮಂತ ಪಾಕವಿಧಾನಗಳನ್ನು ದೇಶಕ್ಕೆ ಮತ್ತು ವಿದೇಶಗಳಿಗೆ ತಿಳಿಸಬೇಕು. ಈ ಬಗ್ಗೆ ಇತ್ತೀಚೆಗೆ ಕ್ಯಾಬಿನೆಟ್​​ನಲ್ಲೂ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ಅಕ್ರಮ ಮಾರಾಟಗಳನ್ನು ಮಾಡಲಾಗುತ್ತಿದೆ ಎಂಬ ವಿಚಾರದ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾದಲ್ಲಿ ಶಾನ್ವಿ ಮೋಜು ಮಸ್ತಿಯ ಫೋಟೋ ಗ್ಯಾಲರಿ

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಬೀಚ್​​ಗಳಲ್ಲಿ ಕಳ್ಳಭಟ್ಟಿ ಮತ್ತು ಅಕ್ರಮ ಮಧ್ಯ ಮಾರಾಟ ನಡೆಸುವ ಮಹಿಳೆಯರನ್ನು ಬಂಧಿಸಿದ್ದಾರೆ. ಸರ್ಕಾರದ ಹೊಸ ನೀತಿಯ ಪ್ರಕಾರ ಎಲ್ಲ ರೆಸ್ಟೋರೆಂಟ್​​ಗಳಲ್ಲಿ ಗೋವಾದ ಆಹಾರಗಳನ್ನು ನೀಡುವಂತೆ ವ್ಯವಸ್ಥೆ ಮಾಡಬೇಕು. ಇದರ ಜತೆಗೆ ಅಕ್ರಮವಾಗಿ ಕಳ್ಳಭಟ್ಟಿ ಮತ್ತು ಮಧ್ಯ ಮಾರಾಟ ಮಾಡುವವರ ವಿರೋಧ ಕ್ರಮಕೈಗೊಳ್ಳವಂತೆ ಹೇಳಿದೆ.

ಇನ್ನು ಗೋವಾದ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಮೂಲಸೌಕರ್ಯಗಳ ಬಗ್ಗೆ ಹಾಗೂ ಬೀಚ್​​ಗಳಲ್ಲಿ, ಪ್ರವಾಸೋದ್ಯಮ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ದುಡಿಯುತ್ತಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಜನರ ಸುರಕ್ಷತೆ ಕೂಡ ನಮ್ಮ ಮೂಲ ಆದ್ಯತೆ ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ