AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಗೋವಾದ ನೈಟ್​​ಕ್ಲಬ್​​ನಲ್ಲಿ ಭೀಕರ ಅಗ್ನಿ ದುರಂತ: 25 ಮಂದಿ ಸಾವು

ಉತ್ತರ ಗೋವಾದ ಅರ್‌ಪೋರಾ ನೈಟ್‌ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಮಂದಿ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವೇ ಅವಘಡಕ್ಕೆ ಕಾರಣವಾಗಿದೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ಹೆಚ್ಚಿನ ಸಾವು-ನೋವಿಗೆ ಮುಖ್ಯ ಕಾರಣ ಎನ್ನಲಾಗಿದ್ದು, ಗೋವಾ ಸಿಎಂ ತನಿಖೆಗೆ ಆದೇಶಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರ ಗೋವಾದ ನೈಟ್​​ಕ್ಲಬ್​​ನಲ್ಲಿ ಭೀಕರ ಅಗ್ನಿ ದುರಂತ: 25 ಮಂದಿ ಸಾವು
ನೈಟ್​​ಕ್ಲಬ್​​ನಲ್ಲಿ ಅಗ್ನಿ ದುರಂತImage Credit source: Google
ಪ್ರಸನ್ನ ಹೆಗಡೆ
|

Updated on:Dec 07, 2025 | 10:10 AM

Share

ಗೋವಾ, ಡಿಸೆಂಬರ್​​ 07: ಉತ್ತರ ಗೋವಾದ ಅರ್‌ಪೋರಾದಲ್ಲಿರುವ ನೈಟ್​​ ಕ್ಲಬ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 25 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್​​ ಕ್ಲಬ್ ಹೊತ್ತಿ ಉರಿದಿದೆ. ಈ ವೇಳೆ ಹಲವರು ಸಜೀವ ದಹನವಾಗಿದ್ದರೆ, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್‌ಕ್ಲಬ್​​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್‌ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್​​ಕ್ಲಬ್​​​ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಅಗ್ನಿ ಅವಘಡ; ಎರಡೂ ಮಹಡಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿ, 3ನೇ ಫ್ಲೋರ್​ನಲ್ಲಿದ್ದ ಕುಟುಂಬ ಬಚಾವ್​ ಆಗಿದ್ದೇ ರೋಚಕ

ಗೋವಾ ಸಿಎಂ ಸಂತಾಪ

ಅಗ್ನಿ ದುರಂತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದು ಹೇಳಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ, ನೈಟ್​​ಕ್ಲಬ್ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದು, ಶೀಘ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ

ಗೋವಾ ಅಗ್ನಿ ದುರಂತದ ವಿಚಾರ ತಿಳಿದು ದುಃಖ ಆಗಿದೆ ಎಂದು ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದೂ ಪ್ರಾರ್ಥಿಸಿದ್ದಾರೆ. ಜೊತೆಗೆ,  ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಇದೇ ವೇಳೆ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 am, Sun, 7 December 25

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!