AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​​ನಿಂದ ಗಡಿಪಾರಾದ ಗೋವಾ ನೈಟ್‌ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ

ಡಿಸೆಂಬರ್ 6ರಂದು ಗೋವಾ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ ಥೈಲ್ಯಾಂಡ್‌ಗೆ ಪಲಾಯನ ಮಾಡಿದ ಸೌರಭ್ ಮತ್ತು ಗೌರವ್ ಲೂತ್ರಾ ಅವರ ಬಂಧನದೊಂದಿಗೆ ಅಂತಾರಾಷ್ಟ್ರೀಯ ಹುಡುಕಾಟ ಕೊನೆಗೊಂಡಿದೆ. ಲೂತ್ರಾ ಸಹೋದರರನ್ನು ಇಂದು ಮಧ್ಯಾಹ್ನ ದೆಹಲಿಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಉತ್ತರ ಗೋವಾ ಕ್ಲಬ್ - ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ್ದರು. ಅವರು ದೇಶದಿಂದ ಪಲಾಯನ ಮಾಡಿದ ನಂತರ ಅವರ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಯಿತು.

ಥೈಲ್ಯಾಂಡ್​​ನಿಂದ ಗಡಿಪಾರಾದ ಗೋವಾ ನೈಟ್‌ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ
Luthra Brothers
ಸುಷ್ಮಾ ಚಕ್ರೆ
|

Updated on: Dec 16, 2025 | 4:30 PM

Share

ನವದೆಹಲಿ, ಡಿಸೆಂಬರ್ 16: ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಲೂತ್ರಾ ಸಹೋದರರಾದ (Luthra Brothers) ಗೌರವ್ ಮತ್ತು ಸೌರಭ್ ಅವರನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಲಾಗಿದೆ. ಇಂದು ಅವರನ್ನು ದೆಹಲಿಗೆ ಕರೆತರಲಾಯಿತು. ಗೋವಾದ ನೈಟ್​​ಕ್ಲಬ್​ನಲ್ಲಿ ಬೆಂಕಿ ಅವಘಡ ಉಂಟಾದ ನಂತರ ಅವರಿಬ್ಬರೂ ಭಾರತ ಬಿಟ್ಟು ಥೈಲ್ಯಾಂಡ್​​ಗೆ ಪರಾರಿಯಾಗಿದ್ದರು. ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದ ಗೋವಾ ಪೊಲೀಸರು ಆ ಇಬ್ಬರು ಸಹೋದರರನ್ನು ಬಂಧಿಸಿದರು.

ಥೈಲ್ಯಾಂಡ್‌ನಿಂದ ವಿಮಾನ ಹತ್ತಿದ ನಂತರ ಲೂತ್ರಾ ಸಹೋದರರು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಚಾರಣೆಗಾಗಿ ಗೋವಾ ರಾಜ್ಯಕ್ಕೆ ಕರೆತಂದ ನಂತರ ಅವರನ್ನು ಡಿಸೆಂಬರ್ 17ರಂದು ಮಾಪುಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಗೋವಾ ನೈಟ್‌ಕ್ಲಬ್​​ ಬೆಂಕಿ ದುರಂತದಲ್ಲಿ 25 ಜನ ಸಾವು; ಮಾಲೀಕರು ಥೈಲ್ಯಾಂಡ್​​ಗೆ ಪರಾರಿ

ಈ ತಿಂಗಳ ಆರಂಭದಲ್ಲಿ ಉತ್ತರ ಗೋವಾದ ಅರ್ಪೋರಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನಲ್ಲಿ ಜನದಟ್ಟಣೆಯ ಕಾರ್ಯಕ್ರಮದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿತು. 25 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳು, ಪರವಾನಗಿ ಷರತ್ತುಗಳು ಮತ್ತು ಇತರ ಶಾಸನಬದ್ಧ ಅವಶ್ಯಕತೆಗಳ ಉಲ್ಲಂಘನೆಯ ಆರೋಪದ ಮೇಲೆ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?