AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ನೈಟ್​ ಕ್ಲಬ್ ದುರಂತ: ಲೂತ್ರಾ ಸಹೋದರರನ್ನು ಥೈಲ್ಯಾಂಡ್​ನಿಂದ ದೆಹಲಿಗೆ ಕರೆತಂದ ಪೊಲೀಸರು

ಗೋವಾದ ಬಿರ್ಚ್​ ಬೈ ರೋಮಿಯೋ ನೈಟ್​ ಕ್ಲಬ್ ಮಾಲೀಕರಾದ ಸೌರಭ್ ಹಾಗೂ ಗೌರವ್ ಲೂತ್ರಾರನ್ನು ಪೊಲೀಸರು ಥೈಲ್ಯಾಂಡ್​ನಿಂದ ದೆಹಲಿಗೆ ಕರೆತಂದಿದ್ದಾರೆ. ನೈಟ್​ಕ್ಲಬ್​ನಲ್ಲಿ ಅಗ್ನಿ ದುರಂತ ಸಂಭವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ನಂತರ ಇಬ್ಬರು ಥೈಲ್ಯಾಂಡ್​ಗೆ ಪಲಾಯನ ಮಾಡಿದ್ದರು. ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ಗೋವಾ ನೈಟ್​ ಕ್ಲಬ್ ದುರಂತ: ಲೂತ್ರಾ ಸಹೋದರರನ್ನು ಥೈಲ್ಯಾಂಡ್​ನಿಂದ ದೆಹಲಿಗೆ ಕರೆತಂದ ಪೊಲೀಸರು
ಲೂತ್ರಾ ಸಹೋದರರನ್ನು ಕರೆತರುತ್ತಿರುವುದು
ನಯನಾ ರಾಜೀವ್
|

Updated on: Dec 16, 2025 | 3:09 PM

Share

ನವದೆಹಲಿ, ಡಿಸೆಂಬರ್ 16: ಗೋವಾ(Goa)ದ ಬಿರ್ಚ್​ ಬೈ ರೋಮಿಯೋ ನೈಟ್​ ಕ್ಲಬ್ ಮಾಲೀಕರಾದ ಸೌರಭ್ ಹಾಗೂ ಗೌರವ್ ಲೂತ್ರಾರನ್ನು ಪೊಲೀಸರು ಥೈಲ್ಯಾಂಡ್​ನಿಂದ ದೆಹಲಿಗೆ ಕರೆತಂದಿದ್ದಾರೆ. ನೈಟ್​ಕ್ಲಬ್​ನಲ್ಲಿ ಅಗ್ನಿ ದುರಂತ ಸಂಭವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ನಂತರ ಇಬ್ಬರು ಥೈಲ್ಯಾಂಡ್​ಗೆ ಪಲಾಯನ ಮಾಡಿದ್ದರು. ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ಕ್ಲಬ್ ಒಳಗೆ ಬಳಸಿದ ಪಟಾಕಿಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಸೂಚಿಸುತ್ತವೆ. ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡ ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಲೂಥ್ರಾ ಸಹೋದರರನ್ನು (ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿತ್ತು. ವಿದೇಶಾಂಗ ಸಚಿವಾಲಯಕ್ಕೆ ಕ್ರಮ ಕೈಗೊಳ್ಳುವಂತೆ ಗೋವಾ ಸರ್ಕಾರ  ವಿನಂತಿಸಿದ ಬಳಿಕ ಲೂತ್ರಾ ಸಹೋದರರಿಬ್ಬರ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿತ್ತು.

ಈವರೆಗೆ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದ್ದು, ಗೋವಾ ಸರ್ಕಾರದ ಆದೇಶದಂತೆ ಲೂತ್ರಾ ಸಹೋದರರ ಒಡೆತನದಲ್ಲಿದ್ದ ಇನ್ನೊಂದು ನೈಟ್‌ಕ್ಲಬ್‌ನ್ನು ನೆಲಸಮಗೊಳಿಸಲಾಗಿದೆ. ಇನ್ನೂ ಈಗಾಗಲೇ ಈ ಸಂಬಂಧ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ, ಗೋವಾ ಸಿಎಂ ಆದೇಶಹೊರಡಿಸಿದ್ದಾರೆ.

ಮತ್ತಷ್ಟು ಓದಿ: ಗೋವಾ ನೈಟ್​ಕ್ಲಬ್ ಅಗ್ನಿ ದುರಂತ: ಲೂತ್ರಾ ಸಹೋದರರ ಒಡೆತನದ ಕಟ್ಟಡ ನೆಲಸಮ

ವಿಮಾನ ರದ್ದತಿ ಮತ್ತು ವಿಳಂಬದಿಂದಾಗಿ ದೇಶಾದ್ಯಂತ ವಿಮಾನಯಾನ ಸಂಸ್ಥೆ ಸಂಕಷ್ಟಕ್ಕೆ ಸಿಲುಕಿದ್ದಾಗ ಇಂಡಿಗೋ ವಿಮಾನದಲ್ಲಿ ಅವರು ಪರಾರಿಯಾಗಿರುವುದು ಅನುಮಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 7 ರಂದು ಬೆಳಗಿನ ಜಾವ 1.17 ಕ್ಕೆ ಸಹೋದರರು ಥೈಲ್ಯಾಂಡ್ಗೆ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಿದ್ದರು.

ಲೂತ್ರಾ ಸಹೋದರರನ್ನು ಕರೆತರುತ್ತಿರುವುದು

ಆ ಸಮಯದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಗೋವಾದ ತಮ್ಮ ನೈಟ್ಕ್ಲಬ್ನಲ್ಲಿ ಬೆಂಕಿಯನ್ನು ನಂದಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದರು. ಬಂಧನಕ್ಕೆ ಹೆದರಿ ಸಹೋದರರು ಭಾರತಕ್ಕೆ ಮರಳಲು ನಿರಾಕರಿಸಿದ್ದರು ಮತ್ತು ಬಂಧನ ಪೂರ್ವ ಜಾಮೀನು ಕೋರಿ ದೆಹಲಿಯ ರೋಹಿಣಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!