Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು ಸುರಕ್ಷಿತ

ಗೋ ಏರ್​ ಫ್ಲೈಟ್​​ನ ವಕ್ತಾರ ಕೂಡ ಘಟನೆಯನ್ನು ವಿವರಿಸಿದ್ದು, ಬೆಂಗಳೂರಿನಿಂದ ಪಾಟ್ನಾಕ್ಕೆ ಹೋಗುತ್ತಿದ್ದ ವಿಮಾನ ತುರ್ತಾಗಿ ನಾಗ್ಪುರದ ಕಡೆ ತಿರುಗವಂತಾಗಲು ಕಾರಣ ಕಾಕ್​ಪಿಟ್​​ನಲ್ಲಿ ಕಾಣಿಸಿಕೊಂಡ ಎಂಜಿನ್​ ದೋಷ ಎಂದಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು ಸುರಕ್ಷಿತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Nov 27, 2021 | 3:08 PM

ಪಾಟ್ನಾ ಮೂಲದ ಗೋ ಏರ್​ ವಿಮಾನ ತಾಂತ್ರಿಕ ದೋಷದಿಂದ ನಾಗ್ಪುರ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶವಾಗಿದೆ. 139 ಪ್ರಯಾಣಿಕರನ್ನು ಹೊತ್ತ ಈ ವಿಮಾನ ಬೆಂಗಳೂರಿನಿಂದ ಹೊರಟಿತ್ತು. ಇದರ ಎಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶವಾಗಿದೆ ಎಂದು ಏರ್​ಲೈನ್ಸ್​ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿದ ನಾಗ್ಪುರ ಏರ್​ಪೋರ್ಟ್ ನಿರ್ದೇಶಕ ಅಬಿಡ್​ ರುಹಿ, G8 873 ಎಂಬ ಗೋ ಏರ್​​ ವಿಮಾನ ಇಂದು ಬೆಳಗ್ಗೆ 11.15ರ ಹೊತ್ತಿಗೆ ತುರ್ತಾಗಿ ಲ್ಯಾಂಡ್​ ಆಗಿದ್ದಾಗಿ ಹೇಳಿದ್ದಾರೆ. 

ವಿಮಾನದ ಎಂಜಿನ್​​ನಲ್ಲಿ ಏನೋ ದೋಷವುಂಟಾಗುತ್ತಿರುವ ಬಗ್ಗೆ ಗೋ ಏರ್​ ವಿಮಾನದ ಪೈಲಟ್​ ನಾಗ್ಪುರ ಏರ್​ ಟ್ರಾಫಿಕ್​ ಕಂಟ್ರೋಲರ್​ಗೆ ಮಾಹಿತಿ ನೀಡಿದರು ಮತ್ತು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಲು ಅನುಮತಿ ಕೇಳಿದರು. ನಾವು ಅದಕ್ಕೆ ಅನುಮತಿ ಕೊಡುವ ಜತೆಗೆ ಮುಂದೆ ಆಗಬಹುದಾದ ಅನಾಹುತ ನಿಯಂತ್ರಿಸಲು ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದೆವು. ಇದನ್ನು ತುರ್ತು ಸಂದರ್ಭವೆಂದು ಪರಿಗಣಿಸಿ ರನ್​ವೇಯನ್ನು ಸಿದ್ಧಮಾಡಲಾಯಿತು. ವೈದ್ಯರು, ಆಂಬುಲೆನ್ಸ್​​ಗಳು, ಅಗ್ನಿಶಾಮಕದಳದ ಸಿಬ್ಬಂದಿಯನ್ನೂ ಸಜ್ಜುಗೊಳಿಸಲಾಯಿತು. ಆದರೆ ಅದೃಷ್ಟವಶಾತ್​ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಯಾರಿಗೂ ಯಾವುದೇ ತೊಂದರೆಯಾಗಲಿಲ್ಲ ಎಂದು ರುಹಿ ಹೇಳಿದ್ದಾರೆ.

ಹಾಗೇ, ಗೋ ಏರ್​ ಫ್ಲೈಟ್​​ನ ವಕ್ತಾರ ಕೂಡ ಘಟನೆಯನ್ನು ವಿವರಿಸಿದ್ದು, ಬೆಂಗಳೂರಿನಿಂದ ಪಾಟ್ನಾಕ್ಕೆ ಹೋಗುತ್ತಿದ್ದ ವಿಮಾನ ತುರ್ತಾಗಿ ನಾಗ್ಪುರದ ಕಡೆ ತಿರುಗವಂತಾಗಲು ಕಾರಣ ಕಾಕ್​ಪಿಟ್​​ನಲ್ಲಿ ಕಾಣಿಸಿಕೊಂಡ ಎಂಜಿನ್​ ದೋಷ. ಪೈಲಟ್​​ನ ಮುಂಜಾಗರೂಕತೆಯಿಂದ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ನಂತರ ಅದರಲ್ಲಿದ್ದ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಲಾಯಿತು ಎಂದು ಹೇಳಿದ್ದಾರೆ. ಹಾಗೇ, ಪ್ರಯಾಣಿಕರಿಗೆ ಆದ ಈ ಅನನಕೂಲಕ್ಕೆ ವಿಷಾದಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Indonesia Open: ಮತ್ತೆ ಸೆಮಿಫೈನಲ್​ನಲ್ಲಿ ಎಡವಿದ ಪಿವಿ ಸಿಂಧು; ಇಂಡೋನೇಷ್ಯಾ ಓಪನ್‌ ಪ್ರಶಸ್ತಿ ಕನಸು ಭಗ್ನ

Published On - 3:07 pm, Sat, 27 November 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ