AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು ಸುರಕ್ಷಿತ

ಗೋ ಏರ್​ ಫ್ಲೈಟ್​​ನ ವಕ್ತಾರ ಕೂಡ ಘಟನೆಯನ್ನು ವಿವರಿಸಿದ್ದು, ಬೆಂಗಳೂರಿನಿಂದ ಪಾಟ್ನಾಕ್ಕೆ ಹೋಗುತ್ತಿದ್ದ ವಿಮಾನ ತುರ್ತಾಗಿ ನಾಗ್ಪುರದ ಕಡೆ ತಿರುಗವಂತಾಗಲು ಕಾರಣ ಕಾಕ್​ಪಿಟ್​​ನಲ್ಲಿ ಕಾಣಿಸಿಕೊಂಡ ಎಂಜಿನ್​ ದೋಷ ಎಂದಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ; ಪ್ರಯಾಣಿಕರು ಸುರಕ್ಷಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 27, 2021 | 3:08 PM

Share

ಪಾಟ್ನಾ ಮೂಲದ ಗೋ ಏರ್​ ವಿಮಾನ ತಾಂತ್ರಿಕ ದೋಷದಿಂದ ನಾಗ್ಪುರ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶವಾಗಿದೆ. 139 ಪ್ರಯಾಣಿಕರನ್ನು ಹೊತ್ತ ಈ ವಿಮಾನ ಬೆಂಗಳೂರಿನಿಂದ ಹೊರಟಿತ್ತು. ಇದರ ಎಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶವಾಗಿದೆ ಎಂದು ಏರ್​ಲೈನ್ಸ್​ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿದ ನಾಗ್ಪುರ ಏರ್​ಪೋರ್ಟ್ ನಿರ್ದೇಶಕ ಅಬಿಡ್​ ರುಹಿ, G8 873 ಎಂಬ ಗೋ ಏರ್​​ ವಿಮಾನ ಇಂದು ಬೆಳಗ್ಗೆ 11.15ರ ಹೊತ್ತಿಗೆ ತುರ್ತಾಗಿ ಲ್ಯಾಂಡ್​ ಆಗಿದ್ದಾಗಿ ಹೇಳಿದ್ದಾರೆ. 

ವಿಮಾನದ ಎಂಜಿನ್​​ನಲ್ಲಿ ಏನೋ ದೋಷವುಂಟಾಗುತ್ತಿರುವ ಬಗ್ಗೆ ಗೋ ಏರ್​ ವಿಮಾನದ ಪೈಲಟ್​ ನಾಗ್ಪುರ ಏರ್​ ಟ್ರಾಫಿಕ್​ ಕಂಟ್ರೋಲರ್​ಗೆ ಮಾಹಿತಿ ನೀಡಿದರು ಮತ್ತು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಲು ಅನುಮತಿ ಕೇಳಿದರು. ನಾವು ಅದಕ್ಕೆ ಅನುಮತಿ ಕೊಡುವ ಜತೆಗೆ ಮುಂದೆ ಆಗಬಹುದಾದ ಅನಾಹುತ ನಿಯಂತ್ರಿಸಲು ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದೆವು. ಇದನ್ನು ತುರ್ತು ಸಂದರ್ಭವೆಂದು ಪರಿಗಣಿಸಿ ರನ್​ವೇಯನ್ನು ಸಿದ್ಧಮಾಡಲಾಯಿತು. ವೈದ್ಯರು, ಆಂಬುಲೆನ್ಸ್​​ಗಳು, ಅಗ್ನಿಶಾಮಕದಳದ ಸಿಬ್ಬಂದಿಯನ್ನೂ ಸಜ್ಜುಗೊಳಿಸಲಾಯಿತು. ಆದರೆ ಅದೃಷ್ಟವಶಾತ್​ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಯಾರಿಗೂ ಯಾವುದೇ ತೊಂದರೆಯಾಗಲಿಲ್ಲ ಎಂದು ರುಹಿ ಹೇಳಿದ್ದಾರೆ.

ಹಾಗೇ, ಗೋ ಏರ್​ ಫ್ಲೈಟ್​​ನ ವಕ್ತಾರ ಕೂಡ ಘಟನೆಯನ್ನು ವಿವರಿಸಿದ್ದು, ಬೆಂಗಳೂರಿನಿಂದ ಪಾಟ್ನಾಕ್ಕೆ ಹೋಗುತ್ತಿದ್ದ ವಿಮಾನ ತುರ್ತಾಗಿ ನಾಗ್ಪುರದ ಕಡೆ ತಿರುಗವಂತಾಗಲು ಕಾರಣ ಕಾಕ್​ಪಿಟ್​​ನಲ್ಲಿ ಕಾಣಿಸಿಕೊಂಡ ಎಂಜಿನ್​ ದೋಷ. ಪೈಲಟ್​​ನ ಮುಂಜಾಗರೂಕತೆಯಿಂದ ವಿಮಾನ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ನಂತರ ಅದರಲ್ಲಿದ್ದ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಲಾಯಿತು ಎಂದು ಹೇಳಿದ್ದಾರೆ. ಹಾಗೇ, ಪ್ರಯಾಣಿಕರಿಗೆ ಆದ ಈ ಅನನಕೂಲಕ್ಕೆ ವಿಷಾದಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Indonesia Open: ಮತ್ತೆ ಸೆಮಿಫೈನಲ್​ನಲ್ಲಿ ಎಡವಿದ ಪಿವಿ ಸಿಂಧು; ಇಂಡೋನೇಷ್ಯಾ ಓಪನ್‌ ಪ್ರಶಸ್ತಿ ಕನಸು ಭಗ್ನ

Published On - 3:07 pm, Sat, 27 November 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?