AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ

ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
ಸಾಧು ಶ್ರೀನಾಥ್​
|

Updated on:Jan 31, 2024 | 12:55 PM

Share

ಹೊಸದಾಗಿ ಮದುವೆಯಾಗುವ ಭಕ್ತರಿಗಾಗಿ ಮಂಗಳಸೂತ್ರಗಳನ್ನು ಮಾರಾಟ ಮಾಡಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ. ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. 2024-25ಕ್ಕೆ ಸಂಬಂಧಿಸಿದಂತೆ, ಆಡಳಿತ ಮಂಡಳಿಯು 5,141 ಕೋಟಿಗಳೊಂದಿಗೆ 2024-25 ರ ಟಿಟಿಡಿಯ ವಾರ್ಷಿಕ ಬಜೆಟ್ ಅನ್ನು ಅನುಮೋದಿಸಿದೆ.

2024-25 ಟಿಟಿಡಿ ವಾರ್ಷಿಕ ಬಜೆಟ್ ವಿಶೇಷಗಳು: ಟಿಟಿಡಿ ನೌಕರರ ವಸತಿ ಪ್ರದೇಶಗಳಲ್ಲಿ ಜಲ್ಲಿಕಲ್ಲು ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ನೌಕರರ ವೇತನ ಹೆಚ್ಚಳಕ್ಕೆ ಆಡಳಿತ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ. ಟಿಟಿಡಿ ಅಧೀನದಲ್ಲಿ ನಡೆಯುತ್ತಿರುವ 60 ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಲಾಗಿದೆ. ಸ್ವಿಮ್ಸ್ ಆಸ್ಪತ್ರೆಯನ್ನು 300 ಹಾಸಿಗೆಗಳಿಂದ 1,200 ಹಾಸಿಗೆಗಳಿಗೆ ವಿಸ್ತರಿಸಲು ಟಿಟಿಡಿ ಮಂಡಳಿಯು ಅನುಮೋದನೆ ನೀಡಿದೆ. ಅನ್ನಮಯ್ಯ ಭವನದ ಜತೆಗೆ ಕುಟೀರಗಳ ಆಧುನೀಕರಣಕ್ಕೆ ಹಾಗೂ ಸಪ್ತಗಿರಿ ಛತ್ರಗಳ ಅಭಿವೃದ್ಧಿಗೆ ಅಪಾರ ಹಣ ಮೀಸಲಿಟ್ಟಿದೆ. ಟಿಟಿಡಿಯಲ್ಲಿ ಒರಾಕಲ್ ಫ್ಯೂಷನ್ ಕ್ಲೌಡ್ ಸಾಫ್ಟ್‌ವೇರ್ ಬಳಕೆಗೆ ಅನುಮೋದನೆ ನೀಡಲಾಗಿದೆ.

ಮತ್ತಷ್ಟು ಓದಿ: ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ ಹಣ ನೀಡದೆ 15 ದಿನಗಳ ಕಾಲ ಉಳಿದಿದ್ದ ಆಂಧ್ರ ಮಹಿಳೆಯ ಬಂಧನ

ವಿಜಯವಾಡ ದುರ್ಗದ ಗುಡಿಯ ಆಡಳಿತ ಮಂಡಳಿ ಸಭೆಯಲ್ಲೂ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ದುರ್ಗಮ್ಮನ ದರ್ಶನಕ್ಕಾಗಿ ಎಲಿವೇಟೆಡ್ ಕ್ಯೂಲೈನ್‌ಗಳನ್ನು ಸ್ಥಾಪಿಸಲು ದುರ್ಗದ ದೇವಸ್ಥಾನದ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಬೆಟ್ಟದ ಮೇಲೆ ಪೂಜಾ ಮಂಟಪ ನಿರ್ಮಾಣಕ್ಕೂ ಅನುಮೋದನೆ ದೊರೆತಿದೆ. ಘಾಟ್ ರಸ್ತೆ ದುರಸ್ತಿ ಕಾಮಗಾರಿ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ದುರ್ಗದ ಗುಡಿ ಆಡಳಿತ ಮಂಡಳಿ ಅಧ್ಯಕ್ಷ ಕರ್ನಾಟಿ ರಾಂಬಾಬು ಹೇಳಿದರು. ಶೀಘ್ರವೇ ಬೆಟ್ಟ ಪ್ರದಕ್ಷಿಣೆ ಮಾರ್ಗದಲ್ಲಿ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Wed, 31 January 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ