AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ

ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 31, 2024 | 12:55 PM

Share

ಹೊಸದಾಗಿ ಮದುವೆಯಾಗುವ ಭಕ್ತರಿಗಾಗಿ ಮಂಗಳಸೂತ್ರಗಳನ್ನು ಮಾರಾಟ ಮಾಡಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ. ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. 2024-25ಕ್ಕೆ ಸಂಬಂಧಿಸಿದಂತೆ, ಆಡಳಿತ ಮಂಡಳಿಯು 5,141 ಕೋಟಿಗಳೊಂದಿಗೆ 2024-25 ರ ಟಿಟಿಡಿಯ ವಾರ್ಷಿಕ ಬಜೆಟ್ ಅನ್ನು ಅನುಮೋದಿಸಿದೆ.

2024-25 ಟಿಟಿಡಿ ವಾರ್ಷಿಕ ಬಜೆಟ್ ವಿಶೇಷಗಳು: ಟಿಟಿಡಿ ನೌಕರರ ವಸತಿ ಪ್ರದೇಶಗಳಲ್ಲಿ ಜಲ್ಲಿಕಲ್ಲು ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ನೌಕರರ ವೇತನ ಹೆಚ್ಚಳಕ್ಕೆ ಆಡಳಿತ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ. ಟಿಟಿಡಿ ಅಧೀನದಲ್ಲಿ ನಡೆಯುತ್ತಿರುವ 60 ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಲಾಗಿದೆ. ಸ್ವಿಮ್ಸ್ ಆಸ್ಪತ್ರೆಯನ್ನು 300 ಹಾಸಿಗೆಗಳಿಂದ 1,200 ಹಾಸಿಗೆಗಳಿಗೆ ವಿಸ್ತರಿಸಲು ಟಿಟಿಡಿ ಮಂಡಳಿಯು ಅನುಮೋದನೆ ನೀಡಿದೆ. ಅನ್ನಮಯ್ಯ ಭವನದ ಜತೆಗೆ ಕುಟೀರಗಳ ಆಧುನೀಕರಣಕ್ಕೆ ಹಾಗೂ ಸಪ್ತಗಿರಿ ಛತ್ರಗಳ ಅಭಿವೃದ್ಧಿಗೆ ಅಪಾರ ಹಣ ಮೀಸಲಿಟ್ಟಿದೆ. ಟಿಟಿಡಿಯಲ್ಲಿ ಒರಾಕಲ್ ಫ್ಯೂಷನ್ ಕ್ಲೌಡ್ ಸಾಫ್ಟ್‌ವೇರ್ ಬಳಕೆಗೆ ಅನುಮೋದನೆ ನೀಡಲಾಗಿದೆ.

ಮತ್ತಷ್ಟು ಓದಿ: ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ ಹಣ ನೀಡದೆ 15 ದಿನಗಳ ಕಾಲ ಉಳಿದಿದ್ದ ಆಂಧ್ರ ಮಹಿಳೆಯ ಬಂಧನ

ವಿಜಯವಾಡ ದುರ್ಗದ ಗುಡಿಯ ಆಡಳಿತ ಮಂಡಳಿ ಸಭೆಯಲ್ಲೂ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ದುರ್ಗಮ್ಮನ ದರ್ಶನಕ್ಕಾಗಿ ಎಲಿವೇಟೆಡ್ ಕ್ಯೂಲೈನ್‌ಗಳನ್ನು ಸ್ಥಾಪಿಸಲು ದುರ್ಗದ ದೇವಸ್ಥಾನದ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಬೆಟ್ಟದ ಮೇಲೆ ಪೂಜಾ ಮಂಟಪ ನಿರ್ಮಾಣಕ್ಕೂ ಅನುಮೋದನೆ ದೊರೆತಿದೆ. ಘಾಟ್ ರಸ್ತೆ ದುರಸ್ತಿ ಕಾಮಗಾರಿ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ದುರ್ಗದ ಗುಡಿ ಆಡಳಿತ ಮಂಡಳಿ ಅಧ್ಯಕ್ಷ ಕರ್ನಾಟಿ ರಾಂಬಾಬು ಹೇಳಿದರು. ಶೀಘ್ರವೇ ಬೆಟ್ಟ ಪ್ರದಕ್ಷಿಣೆ ಮಾರ್ಗದಲ್ಲಿ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Wed, 31 January 24

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ