AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಕ್ಕೇರುತ್ತಲೇ ಇದೆ ಚಿನ್ನದ ಬೆಲೆ, ಬೆಳ್ಳಿ ಎಷ್ಟು?

ನವದೆಹಲಿ: ಎಲ್ಲೆಡೆ ಕೊರೊನಾ ಹಾವಳಿಯಿಂದಾಗಿ ಮಾರುಕಟ್ಟೆ ಕುಸಿತ ಕಾಣುತ್ತಿದ್ರೆ, ಬಂಗಾರದ ಬೆಲೆ ಮಾತ್ರ ನಾಗಾಲೋಟದಲ್ಲಿ ಏರುತ್ತಲೆ ಇದೆ. ಇದುವರೆಗಿನ ಎಲ್ಲಾ ದಾಖಲೆಗಳನ್ನು ಮುರಿದು ಬಂಗಾರದ ಬೆಲೆ ಗಗನಕ್ಕೇರಿದೆ. ಹೌದು, ಬಂಗಾರದ ಬೆಲೆ ಈಗ ಗಗನಕ್ಕೇರಿದೆ. ಶುಕ್ರವಾರ ರಾತ್ರಿ  ಸರಕು ಮಾರುಕಟ್ಟೆ ಮುಕ್ತಾಯದ ಹೊತ್ತಿಗೆ ಬಂಗಾರದ ಬೆಲೆ ಭಾರತದಲ್ಲಿ 10 ಗ್ರಾಮ್‌ಗೆ 57,008 ರೂಪಾಯಿಗೆ ಏರಿದೆ. ಇದು ಇದುವರೆಗಿನ ದಾಖಲೆಯ ಬೆಲೆ. ಕಳೆದ 16 ವಾರಗಳಿಂದ ಬಂಗಾರದ ಬೆಲೆ ಇದೇ ರೀತಿ ಏರುತ್ತಲೇ ಇದೆ. ಒಮ್ಮೆಯೂ ಬೆಲೆಯಲ್ಲಿ ಇಳಿಕೆ […]

ಗಗನಕ್ಕೇರುತ್ತಲೇ ಇದೆ ಚಿನ್ನದ ಬೆಲೆ, ಬೆಳ್ಳಿ ಎಷ್ಟು?
Guru
Guru| Edited By: ಸಾಧು ಶ್ರೀನಾಥ್​|

Updated on: Aug 08, 2020 | 3:50 PM

Share

ನವದೆಹಲಿ: ಎಲ್ಲೆಡೆ ಕೊರೊನಾ ಹಾವಳಿಯಿಂದಾಗಿ ಮಾರುಕಟ್ಟೆ ಕುಸಿತ ಕಾಣುತ್ತಿದ್ರೆ, ಬಂಗಾರದ ಬೆಲೆ ಮಾತ್ರ ನಾಗಾಲೋಟದಲ್ಲಿ ಏರುತ್ತಲೆ ಇದೆ. ಇದುವರೆಗಿನ ಎಲ್ಲಾ ದಾಖಲೆಗಳನ್ನು ಮುರಿದು ಬಂಗಾರದ ಬೆಲೆ ಗಗನಕ್ಕೇರಿದೆ.

ಹೌದು, ಬಂಗಾರದ ಬೆಲೆ ಈಗ ಗಗನಕ್ಕೇರಿದೆ. ಶುಕ್ರವಾರ ರಾತ್ರಿ  ಸರಕು ಮಾರುಕಟ್ಟೆ ಮುಕ್ತಾಯದ ಹೊತ್ತಿಗೆ ಬಂಗಾರದ ಬೆಲೆ ಭಾರತದಲ್ಲಿ 10 ಗ್ರಾಮ್‌ಗೆ 57,008 ರೂಪಾಯಿಗೆ ಏರಿದೆ. ಇದು ಇದುವರೆಗಿನ ದಾಖಲೆಯ ಬೆಲೆ. ಕಳೆದ 16 ವಾರಗಳಿಂದ ಬಂಗಾರದ ಬೆಲೆ ಇದೇ ರೀತಿ ಏರುತ್ತಲೇ ಇದೆ. ಒಮ್ಮೆಯೂ ಬೆಲೆಯಲ್ಲಿ ಇಳಿಕೆ ಕಂಡಿಲ್ಲ.

ಬಂಗಾರದ ಜೊತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರುತ್ತಿದೆ. ಗುರುವಾರ ಮಾರುಕಟ್ಟೆ ಮುಕ್ತಾಯದ ಹೊತ್ತಿಗೆ ಬೆಳ್ಳಿಯ ಬೆಲೆ ಪ್ರತಿ ಕಿ. ಗ್ರಾಂ.ಗೆ 576 ರೂ.ಗಳಷ್ಟು ಹೆಚ್ಚಾಗಿದೆ. ಅಂದ್ರೆ ಪ್ರತಿ ಕಿ.ಗ್ರಾ ಬೆಳ್ಳಿಯ ಬೆಲೆ ಈಗ 77,840 ರೂಪಾಯಿಯಷ್ಟಿದೆ. ಬೆಳ್ಳಿಯ ಬೆಲೆ ಕೂಡಾ ಕಳೆದ ಕೆಲ ದಿನಗಳಿಂದ ಏರುತ್ತಲೇ ಇದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಈ ರೀತಿ ನಾಗಾಲೋಟದಲ್ಲಿ ಏರುತ್ತಿದ್ರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾತ್ರ ಚಿನ್ನದ ಬೆಲೆ ಅಷ್ಟಕ್ಕಷ್ಟೆ ಇದೆ. ಅಂದ್ರೆ ಸಾಮಾನ್ಯ ಸಮಯದಲ್ಲಿರುವುದಕ್ಕಿಂತ ಕಡಿಮೆ ಇದೆ. ಚಿನ್ನ ಅಮೆರಿಕದ ಡಾಲರ್‌ ಮೌಲ್ಯದಲ್ಲಿ ಪ್ರತಿ ಔನ್ಸ್‌ಗೆ 2,061 ಯುಎಸ್ ‌ಡಾಲರ್‌ ಇದ್ರೆ, ಬೆಳ್ಳಿ ಪ್ರತಿ ಔನ್ಸ್‌ಗೆ 28.36 ಯುಎಸ್‌ ಡಾಲರ್‌ನಷ್ಟಿದೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!